7:58 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರ ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ: ಅಭಿನಂದನೆ ಸಲ್ಲಿಕೆ

18/12/2025, 11:34

ದೆಹಲಿ(reporterterkarnataka com): ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ನಿತಿನ್ ನಬೀನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
‘ಯುವ ಸಮೂಹ’ ಸಂಘಟನೆಯ ಬಹುದೊಡ್ಡ ಶಕ್ತಿ, ಈ ನಿಟ್ಟಿನಲ್ಲಿ ಯುವ ಉತ್ಸಾಹಿಗಳನ್ನು ಗುರುತಿಸುವುದು ಭಾರತೀಯ ಜನತಾ ಪಾರ್ಟಿಯ ಆದ್ಯತೆ ಹಾಗೂ ಬದ್ಧತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರೂ ಆದ ಕೇಂದ್ರ ಸಚಿವ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಇತರ ವರಿಷ್ಠರು ಯುವ ನಾಯಕ ನಿತಿನ್ ನಬೀನ್ ಅವರನ್ನು ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ದೇಶದ ಯುವ ಜನರಿಗೆ ಸ್ಫೂರ್ತಿಯ ಸಂದೇಶ ರವಾನಿಸಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದ್ದಾರೆ.

ಬಿಜೆಪಿ, ಇತಿಹಾಸದಲ್ಲಿ ಅತ್ಯುನ್ನತ ಜವಾಬ್ದಾರಿ ವಹಿಸಿಕೊಂಡ ಯುವ ನಾಯಕ ಎಂಬ ಹೆಗ್ಗಳಿಕೆಗೆ ನಿತಿನ್ ನಬೀನ್ ಪಾತ್ರರಾಗಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಪಕ್ಷ ನಿಷ್ಠೆ, ಕ್ರಿಯಾಶೀಲತೆ, ರಾಷ್ಟ್ರಬದ್ಧತೆ ಹಾಗೂ ಸಂಘಟನಾ ಸಾಮಥ್ರ್ಯವನ್ನು ಸಮರ್ಥವಾಗಿ ನಿರೂಪಿಸಿದ್ದಾರೆ. ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಹಾರದಲ್ಲಿ ಅಪಾರ ಜನಮನ್ನಣೆ ಗಳಿಸಿದ ಜನನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ತಿಳಿಸಿದ್ದಾರೆ.
ನಿತಿನ್ ನಬೀನ್‍ರವರು ಪ್ರಸ್ತುತ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಮೂಲಕ ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು