8:02 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಇಂದು ರಾತ್ರಿ 9ರಿಂದ ಮೇ 12ರ ವರೆಗೆ ಲಾಕ್ ಡೌನ್: ವಿಮಾನ ಹಾರಲಿದೆ, ರೈಲು ಓಡಲಿದೆ !!

27/04/2021, 04:20

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಂಗಳವಾರ(ಇಂದು) ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಆದರೆ ವಿಮಾನಗಳು ಹಾರಾಟ ನಡೆಸಲಿವೆ. ರೈಲು ಹಳಿಗಳ ಮೇಲೆ ಓಡಲಿವೆ.

ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಆರ್ಥಿಕ ಚಟುವಟಿಕೆಗಳು ಸ್ತಬ್ದಗೊಳ್ಳಲಿವೆ. ಸಿನಿಮಾ, ಶಾಪಿಂಗ್ ಮಾಲ್, ವಾಣಿಜ್ಯ ಕಟ್ಟಡ, ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು,  ಯೋಗ ಕೇಂದ್ರ, ಜಿಮ್, ಸ್ವಿಮ್ಮಿಂಗ್ ಪೂಲ್, ಪಾರ್ಕ್, ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿಷೇಧವಿದೆ. ಕೋಚಿಂಗ್ ತರಗತಿ ಬಂದ್ ಆಗಲಿದೆ. ಆನ್ ಲೈನ್ ಕೋಚಿಂಗ್ ಅಬಾಧಿತ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ. ಆದರೆ ಕುಳಿತು ತಿನ್ನಲು ಅವಕಾಶವಿಲ್ಲ. ಮದ್ಯದಂಗಡಿಗಳಿಗೆ ಬೆಳಗ್ಗೆ 6ರಿಂದ 10ರ ವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಗಾರ್ಮೆಂಟ್ಸ್ ಹೊರತುಪಡಿಸಿ ಇತರ ಉತ್ಪಾದನಾ ವಲಯಗಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ವಿಮಾನ ಹಾರಾಟ ನಡೆಸಲಿವೆ. ರೈಲು ಓಡಲಿವೆ. ಇದರ ಪ್ರಯಾಣಿಕರಿಗೆ ಪ್ರತ್ಯೇಕ ಕ್ಯಾಬ್ ವ್ಯವಸ್ಥೆ ಮಾಡಲಾಗಿದೆ. ಮೆಟ್ರೋ ರೈಲು ಓಡಾಟ ನಿಲ್ಲಿಸಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು