3:17 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಸ್ಟೀಲ್ ಸಿಟಿ ಮ್ಯಾರಥಾನ್: ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗಿ

04/08/2024, 19:05

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ನಗರದಲ್ಲಿನ ಬಳ್ಳಾರಿ ಸೈರ್ಲೆಸ್ಟ್ ರನರ್ಸ್ ಫೌಂಡೇಶನ್ ಮತ್ತು ಜೆ ಎಸ್ ಡಬ್ಲು ಸಹಯೋಗದೊಂದಿಗೆ ಅಗಸ್ಟ್ 4ರಂದು ಸ್ಟೀಲ್ ಸಿಟಿ ಮ್ಯಾರಥಾನ್ ಹಮ್ಮಿಕೊಂಡಿದ್ದು ಇದರಲ್ಲಿ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಾಲೆಯ ವಿದ್ಯಾರ್ಥಿಗಳು ಮ್ಯಾರಥಾನ್ ನಲ್ಲಿ ತೋರಿದ ಉತ್ಸಾಹ ಮತ್ತು ಕ್ರೀಡಾಸಕ್ತಿಯಿಂದ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಓಟದಿಂದ ಮಕ್ಕಳಲ್ಲಿ ದೈಹಿಕ ಸುಸ್ಥಿತಿಯನ್ನು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶ ಹೊಂದಿತ್ತು.
ವಿದ್ಯಾರ್ಥಿಗಳು ತಮ್ಮ ದೈಹಿಕ ಸಾಮರ್ಥ್ಯವನ್ನು ತೋರಿಸುದಷ್ಟೇ ಅಲ್ಲದೇ, ಆರೋಗ್ಯಕರ ಜೀವನ ಶೈಲಿಯನ್ನು ಅನುಸರಿಸುವ ಮಹತ್ವದ ಅನುಭವವನ್ನು ಹೊಂದಿದರು. ಸಾಧನೆ ಮತ್ತು ಆತ್ಮ ವಿಶ್ವಾಸದ ಭಾವನೆಯನ್ನು ಶಾಲೆಯ ಮಕ್ಕಳು ಹೊಂದಿದ್ದರು. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳು ಭಾಗವಹಿಸುವಿಕೆಯನ್ನು ಹೆಮ್ಮೆ ಪಟ್ಟರು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿ ಬೌದ್ಧಿಕ ಉನ್ನತಿಗೆ ಸಮಾನ ಪ್ರಾಮುಖ್ಯತೆಯನ್ನು ನೀಡುತ್ತಿದೆ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಪ್ರತಿಕ್ರಿಯೆಯು ಸಂತೃಪ್ತವಾಗಿದೆ ಎಂದು ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪಿ. ಎನ್. ಸುರೇಶ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಓಟವು ಕ್ರೀಡೆಗಳಲ್ಲಿ ಅತ್ಯುತ್ತಮವಾದದ್ದು, ಓಟದ ಮುಖಾಂತರ ಮಕ್ಕಳಲ್ಲಿ ಆತ್ಮಸ್ಥೈರ್ಯ ಹಾಗೂ ಮನೋಬಲವನ್ನು ಹೆಚ್ಚಿಸುತ್ತದೆ. ನಮ್ಮ ಶಾಲೆಯಲ್ಲಿ ಕ್ರೀಡೆಗಳಿಗೆ ಹೆಚ್ಚು ಮಹತ್ವವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳು ಹಾಗೂ ಕ್ರೀಡಾಪಟುಗಳ ಬಗ್ಗೆ ಸವಿವರವಾಗಿ ಶಾಲೆಯ ಮುಖ್ಯಗುರುಗಳಾದ ವಿರೇಶ್ ರವರು ತಮ್ಮ ಮಾತುಗಳಲ್ಲಿ ತಿಳಿಸಿಕೊಟ್ಟರು.
ಈ ಮ್ಯಾರಥಾನ್ ನಲ್ಲಿ ಶಾಲೆಯ ವಿದ್ಯಾರ್ಥಿಗಳು
5 ಕಿಮೀ ಓಟಕ್ಕೆ ನೊಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳು ದೈಹಿಕ ಆರೋಗ್ಯಕ್ಕೆ ವಿದ್ಯಾಭ್ಯಾಸದಷ್ಟೇ ಪ್ರಾಮುಖ್ಯತೆಯನ್ನು ನೀಡುವ ಸಮತೋಲನಾತ್ಮಕ ಶಿಕ್ಷಣದತ್ತ ಶ್ರೀ ವಾಸವಿ ವಿದ್ಯಾಲಯವು 42 ವರ್ಷಗಳಿಂದ ಬದ್ದತೆಯನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು