11:09 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಸ್ಥಿರಾಸ್ತಿ; ಕೋಲಾರ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಅಕ್ರಂ ಪಾಷ

30/08/2024, 14:07

ಶಬ್ಬೀರ್ ಅಹಮ್ಮದ್ ಕೋಲಾರ

info.reporterkarnataka@gmail.com

ನಾಗರೀಕ ಕೇಂದ್ರಿತ ಸುಧಾರಣೆ ಭಾಗವಾಗಿ ಪ್ರಸಕ್ತ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಕೋಲಾರ ಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೊಂದಣಿ ಕಚೇರಿಯಲ್ಲಿ ನೋಂದಣಿ ಮಾಡಲು ಅನುಕೂಲವಾಗುವಂತೆ “ಎನಿವೇರ್ ನೋಂದಣಿ” ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದ್ದಾರೆ.
ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ(6)ರಂತೆ 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಮತ್ತು ಕಳೆದ ಮಾರ್ಚ್ ಮಾಹೆಯಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಅಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇದೀಗ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಘಟಕವನ್ನು ಒಂದು ಯೂನಿಟ್ ಎಂದು ಪರಿಗಣಿಸಿ ಆ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಛೇರಿಗಳಿಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಎಂದರು.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ. ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಯಿಂದ ಸಿರಾಸ್ತಿ ಇರುವ ಕೋಲಾರ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಛೇರಿಯಲ್ಲಿ ದಸ್ತಾವೇಜು
ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ
ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮನವಿ ಮಾಡಿದ್ದಾರೆ. ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿತಾಯವಾಗಲಿದೆ. ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಲಿದ್ದು, ವಿಳಂಬವನ್ನು ತಡೆಗಟ್ಟಲಿದೆ. ಸಾರ್ವಜನಿಕರು ಸ್ಲಾಟ್ ಲಭ್ಯವಿರುವಂತಹ ಸಮೀಪದ ನೋಂದಣಿ ಕಚೇರಿಯನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಬಹುದು. ಇದರಿಂದ ಉಪ ನೋಂದಣಿ ಕಛೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುವುದಲ್ಲದೆ ಕಛೇರಿ ಸಿಬ್ಬಂದಿಗಳ ಮೇಲಿನ ಕೆಲಸದ ಒತ್ತಡ ಸಹ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು