6:58 PM Wednesday23 - April 2025
ಬ್ರೇಕಿಂಗ್ ನ್ಯೂಸ್
ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:…

ಇತ್ತೀಚಿನ ಸುದ್ದಿ

ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ  ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ

25/03/2022, 19:53

ರಾಹುಲ್ ಅಥಣಿ ಬೀದರ್

info.reporterkarnataka@gmail.com

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್

ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ  ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾಮದಲ್ಲಿ ಗ್ರಾಮದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆಗೆ ಗಳಿಗೆ ನೇರ ಮಾರುಕಟ್ಟೆ ಒದಗಿಸುವ ಸಲುವಾಗ ಮಾಸಿಕ ಸಂಜೀವಿನಿ ಸಂತೆಯನ್ನು ಏರ್ಪಡಿಸಲಾಯಿತು.

ಈ ಸಂತೆಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ವಸ್ತುಗಳ ಪ್ರದರ್ಶನ  ಮತ್ತು ಮಾರಾಟ ಮಾಡಲಾಯಿತು. ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ನೀಡಿದ ತಾಲ್ಲೂಕಾ ಯೋಜನಾ ಅಧಿಕಾರಿ ಶಂಕರ ಬಿ. ಕನಕ ಮಾತನಾಡಿ, ಸಂತೆಗಳನ್ನು ಏರ್ಪಡಿಸುವದರಿಂದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ಉತ್ಪಾದನೆ ಗಳಿಗೆ ಯೋಗ್ಯ ವಾದ ಬೆಲೆ ಸಿಗುವಂತಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯುವಂತೆ ಮನವಿ ಮಾಡಿದರು. 

ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಮನ್ನಾ ಏ ಖೇಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಳಾದ ಭಾಗ್ಯಜೋತಿ ಮಾತನಾಡಿ, ಈ ಸಂತೆ ಯಿಂದ ಮಹಿಳೆಯರು ಸ್ವಾವಲಂಬಿಯಾಗುವದಕ್ಕೆ ಸಹಕಾರಿಯಾಗುತ್ತದೆ.  ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಈ  ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಕೊಂಡರೆ ಮಾಸಿಕ ಸಂಜೀವಿನಿ ಸಂತೆಯನ್ನು ಮುಂಬರುವ ದಿನಗಳಲ್ಲಿ ಪ್ರತಿ ವಾರಕ್ಕೊಮ್ಮೆ ಪ್ರಾರಂಬಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಗುಂಡಮ್ಮ ನಾಟಿಕಾರ ಹಾಗೂ ಗ್ರಾಮದ ಮುಖಂಡರು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು