10:57 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ  ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ

25/03/2022, 19:53

ರಾಹುಲ್ ಅಥಣಿ ಬೀದರ್

info.reporterkarnataka@gmail.com

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್

ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ  ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾಮದಲ್ಲಿ ಗ್ರಾಮದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆಗೆ ಗಳಿಗೆ ನೇರ ಮಾರುಕಟ್ಟೆ ಒದಗಿಸುವ ಸಲುವಾಗ ಮಾಸಿಕ ಸಂಜೀವಿನಿ ಸಂತೆಯನ್ನು ಏರ್ಪಡಿಸಲಾಯಿತು.

ಈ ಸಂತೆಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ವಸ್ತುಗಳ ಪ್ರದರ್ಶನ  ಮತ್ತು ಮಾರಾಟ ಮಾಡಲಾಯಿತು. ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ನೀಡಿದ ತಾಲ್ಲೂಕಾ ಯೋಜನಾ ಅಧಿಕಾರಿ ಶಂಕರ ಬಿ. ಕನಕ ಮಾತನಾಡಿ, ಸಂತೆಗಳನ್ನು ಏರ್ಪಡಿಸುವದರಿಂದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ಉತ್ಪಾದನೆ ಗಳಿಗೆ ಯೋಗ್ಯ ವಾದ ಬೆಲೆ ಸಿಗುವಂತಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯುವಂತೆ ಮನವಿ ಮಾಡಿದರು. 

ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಮನ್ನಾ ಏ ಖೇಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಳಾದ ಭಾಗ್ಯಜೋತಿ ಮಾತನಾಡಿ, ಈ ಸಂತೆ ಯಿಂದ ಮಹಿಳೆಯರು ಸ್ವಾವಲಂಬಿಯಾಗುವದಕ್ಕೆ ಸಹಕಾರಿಯಾಗುತ್ತದೆ.  ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಈ  ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಕೊಂಡರೆ ಮಾಸಿಕ ಸಂಜೀವಿನಿ ಸಂತೆಯನ್ನು ಮುಂಬರುವ ದಿನಗಳಲ್ಲಿ ಪ್ರತಿ ವಾರಕ್ಕೊಮ್ಮೆ ಪ್ರಾರಂಬಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಗುಂಡಮ್ಮ ನಾಟಿಕಾರ ಹಾಗೂ ಗ್ರಾಮದ ಮುಖಂಡರು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು