9:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ  ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ

25/03/2022, 19:53

ರಾಹುಲ್ ಅಥಣಿ ಬೀದರ್

info.reporterkarnataka@gmail.com

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್

ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ  ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾಮದಲ್ಲಿ ಗ್ರಾಮದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆಗೆ ಗಳಿಗೆ ನೇರ ಮಾರುಕಟ್ಟೆ ಒದಗಿಸುವ ಸಲುವಾಗ ಮಾಸಿಕ ಸಂಜೀವಿನಿ ಸಂತೆಯನ್ನು ಏರ್ಪಡಿಸಲಾಯಿತು.

ಈ ಸಂತೆಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ವಸ್ತುಗಳ ಪ್ರದರ್ಶನ  ಮತ್ತು ಮಾರಾಟ ಮಾಡಲಾಯಿತು. ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ನೀಡಿದ ತಾಲ್ಲೂಕಾ ಯೋಜನಾ ಅಧಿಕಾರಿ ಶಂಕರ ಬಿ. ಕನಕ ಮಾತನಾಡಿ, ಸಂತೆಗಳನ್ನು ಏರ್ಪಡಿಸುವದರಿಂದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡಿದ ಉತ್ಪಾದನೆ ಗಳಿಗೆ ಯೋಗ್ಯ ವಾದ ಬೆಲೆ ಸಿಗುವಂತಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯುವಂತೆ ಮನವಿ ಮಾಡಿದರು. 

ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಮನ್ನಾ ಏ ಖೇಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಳಾದ ಭಾಗ್ಯಜೋತಿ ಮಾತನಾಡಿ, ಈ ಸಂತೆ ಯಿಂದ ಮಹಿಳೆಯರು ಸ್ವಾವಲಂಬಿಯಾಗುವದಕ್ಕೆ ಸಹಕಾರಿಯಾಗುತ್ತದೆ.  ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಈ  ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಕೊಂಡರೆ ಮಾಸಿಕ ಸಂಜೀವಿನಿ ಸಂತೆಯನ್ನು ಮುಂಬರುವ ದಿನಗಳಲ್ಲಿ ಪ್ರತಿ ವಾರಕ್ಕೊಮ್ಮೆ ಪ್ರಾರಂಬಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಗುಂಡಮ್ಮ ನಾಟಿಕಾರ ಹಾಗೂ ಗ್ರಾಮದ ಮುಖಂಡರು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು