12:46 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ

06/11/2024, 19:10

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಳೆದೆರಡು ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು ಯಶಸ್ವಿಯಾಗಿ ಸಾಗಿದ್ದು ಲಕ್ಷಾಂತರ ಜನರನ್ನು ಆಕರ್ಷಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಿತ್ತು. ಅದರಂತೆ ಈ ಬಾರಿಯೂ ಹಿಂದಿನ ಆವೃತ್ತಿಗಳಂತೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಪಬ್ಬಾಸ್, ಮಣ್ಣಗುಡ್ಡ, ಕೆನರಾ ಹೈಸ್ಕೂಲ್ ಉರ್ವದ ಸುತ್ತಮುತ್ತ ಸಂಜೆ 4 ರಿಂದ ರಾತ್ರಿ 11ರ ವರೆಗೆ ಫುಡ್ ಫಿಯೆಸ್ಟಾ ಆಯೋಜಿಸಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳೂ ನಡೆಯಲಿವೆ. ಬಹು ಬೇಡಿಕೆಯನುಸಾರ ಈ ಬಾರಿ ಸಸ್ಯಾಹಾರಿಗಳಿಗೆಂದೇ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗುವುದಾಗಿದ್ದು ಮಕ್ಕಳಿಗಾಗಿ ವಿಶೇಷ ವಿನೋದಾವಳಿಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಷ್ಠಾನದ ಮಾರ್ಗದರ್ಶಕರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಅತ್ಯಂತ ಯಶಸ್ವಿಯಾಗಿ ಸಮಾಪ್ತಿಗೊಂಡ ಕಳೆದೆರಡು ಬಾರಿಯ ಫುಡ್ ಫೆಸ್ಟ್ ನಿಂದ ಉತ್ತೇಜನಗೊಂಡು ಸುರತ್ಕಲ್, ಮೂಡಬಿದ್ರಿ ಸೇರಿದಂತೆ ಅನೇಕ ಕಡೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆದಿವೆ. ಇದು ಎಲ್ಲೆಡೆ ಆಹಾರ ಸಂಸ್ಕೃತಿಯ ವಿನಿಮಯಕ್ಕೆ ದಾರಿಯಾಗಲಿದ್ದು ಈ ಬಾರಿಯ ಸ್ಟ್ರೀಟ್ ಫುಡ್ ಫಿಯೆಸ್ಟ ಈ ಹಿಂದಿಗಿಂತಲೂ ಹೆಚ್ಚಿನ ಜನರನ್ನು ಆಕರ್ಷಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ್, ನರೇಶ್ ಶೆಣೈ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು