10:35 PM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ

06/11/2024, 19:10

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಳೆದೆರಡು ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು ಯಶಸ್ವಿಯಾಗಿ ಸಾಗಿದ್ದು ಲಕ್ಷಾಂತರ ಜನರನ್ನು ಆಕರ್ಷಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಿತ್ತು. ಅದರಂತೆ ಈ ಬಾರಿಯೂ ಹಿಂದಿನ ಆವೃತ್ತಿಗಳಂತೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಪಬ್ಬಾಸ್, ಮಣ್ಣಗುಡ್ಡ, ಕೆನರಾ ಹೈಸ್ಕೂಲ್ ಉರ್ವದ ಸುತ್ತಮುತ್ತ ಸಂಜೆ 4 ರಿಂದ ರಾತ್ರಿ 11ರ ವರೆಗೆ ಫುಡ್ ಫಿಯೆಸ್ಟಾ ಆಯೋಜಿಸಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳೂ ನಡೆಯಲಿವೆ. ಬಹು ಬೇಡಿಕೆಯನುಸಾರ ಈ ಬಾರಿ ಸಸ್ಯಾಹಾರಿಗಳಿಗೆಂದೇ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗುವುದಾಗಿದ್ದು ಮಕ್ಕಳಿಗಾಗಿ ವಿಶೇಷ ವಿನೋದಾವಳಿಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಷ್ಠಾನದ ಮಾರ್ಗದರ್ಶಕರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಅತ್ಯಂತ ಯಶಸ್ವಿಯಾಗಿ ಸಮಾಪ್ತಿಗೊಂಡ ಕಳೆದೆರಡು ಬಾರಿಯ ಫುಡ್ ಫೆಸ್ಟ್ ನಿಂದ ಉತ್ತೇಜನಗೊಂಡು ಸುರತ್ಕಲ್, ಮೂಡಬಿದ್ರಿ ಸೇರಿದಂತೆ ಅನೇಕ ಕಡೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆದಿವೆ. ಇದು ಎಲ್ಲೆಡೆ ಆಹಾರ ಸಂಸ್ಕೃತಿಯ ವಿನಿಮಯಕ್ಕೆ ದಾರಿಯಾಗಲಿದ್ದು ಈ ಬಾರಿಯ ಸ್ಟ್ರೀಟ್ ಫುಡ್ ಫಿಯೆಸ್ಟ ಈ ಹಿಂದಿಗಿಂತಲೂ ಹೆಚ್ಚಿನ ಜನರನ್ನು ಆಕರ್ಷಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ್, ನರೇಶ್ ಶೆಣೈ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು