9:42 PM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಜರ್ಮನಿಯಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದ ಕುಂಜತ್‌ಬೈಲ್‌ನ ವಿದ್ಯಾರ್ಥಿ ನೀರುಪಾಲು

05/07/2026, 21:19

ಮಂಗಳೂರು(reporterkarnataka.com): ಜರ್ಮನಿಯಲ್ಲಿ ಶಿಕ್ಷಣ ಪಡೆಯುತ್ತಿದ್ದ ಮರಕಡ-ಕುಂಜತ್‌ಬೈಲ್‌ನ ವಿದ್ಯಾರ್ಥಿ ಮೊಹಮ್ಮದ್ ಅನಿಜ್‌ ಅಬೂಬಕ್ಕರ್(21) ಎಂಬಾತ ನೀರುಪಾಲಾಗಿದ್ದಾನೆ.
ಜರ್ಮನಿಯ ಹಾಲೆಯ ರಹ್ನ್ ಶಿಕ್ಷಣ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (BBA) ಪದವಿಯ ಮೂರನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಗುರುವಾರ ಸ್ನೇಹಿತರೊಂದಿಗೆ ಸೇರಿ ಲೀಪ್‌ಜಿಗ್ ಪ್ರಾಂತ್ಯದ ಬಳಿ ವಿಹಾರಕ್ಕೆಂದು ಹೊರಟಿದ್ದು, ಈ ವೇಳೆ ಸಾವನ್ನಪ್ಪಿದ್ದು, ನೀರಿನಲ್ಲಿ ಮುಳುಗಿ ಈ ಘಟನೆ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

*ಏನಿದು ಘಟನೆ?:*
ಗುರುವಾರ ಬೆಳ್ಳಿಗೆ ಸ್ನೇಹಿತರೊಂದಿಗೆ ಸೇರಿ ಅನಿಜ್ ಟ್ರಕ್ಕಿಂಗ್‌ ಮಾಡಲು ಹೊರಟಿದ್ದು, ಚಾರಣದ ಬಳಿಕ ಈತ ಹಾಗೂ ಈತನ ಸ್ನೇಹಿತರು ಜೊತೆಗೂಡಿ ಲೀಪ್‌ಜಿಗ್‌ನ ರೆಡ್ ಬುಲ್ ಅರೆನಾ ಬಳಿ ಇರುವ ನೀರಿನ ಮನರಂಜನಾ ಪ್ರದೇಶಕ್ಕೆ ತೆರಳಿದ್ದು, ಈ ಘಟನೆ ನಡೆದಿದೆ. ಸ್ವಲ್ಪ ಸಮಯದ ಬಳಿಕ ಹೀಗೆ ಅನಿಜ್‌ ಕಾಣೆಯಾಗಿರುವುದು ತಿಳಿದುಬರುತ್ತಿದ್ದಂತೆ ಲ್ಯಾಂಡೌರ್ ಸೇತುವೆ ಪ್ರದೇಶದ ತುರ್ತು ಸೇವೆಗಳಿಗೆ ಮಾಹಿತಿ ನೀಡಲಾಗಿದ್ದು, ತಕ್ಷಣವೇ ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಶೋಧ ಕಾರ್ಯನಡೆಸಿ, ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು