11:59 PM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

Student Missing | ಚಿಕ್ಕಮಗಳೂರು: ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿ ಬಾಲಕರು ನಾಪತ್ತೆ

13/03/2025, 18:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದಲ್ಲಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ವಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
*ಘಟನೆ ವಿವರ:* ನಾಪತ್ತೆಯಾದ ವಿದ್ಯಾರ್ಥಿಗಳು ಕಳೆದ 10 ದಿನಗಳ ಹಿಂದೆ ಮಧ್ಯರಾತ್ರಿ ಶಾಲೆಯಿಂದ ಕಾಣೆಯಾಗಿದ್ದಾರೆ. ಅವರು ಮನೆಗೂ ತೆರಳಿಲ್ಲ, ಅವರ ಆಸರೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.


ಈ ಹಿಂದೆಯೂ ಈ ಇಬ್ಬರು ಮಕ್ಕಳು ವಸತಿ ಶಾಲೆಯಲ್ಲಿ ಇರಲು ಹಿಂದೇಟು ಹಾಕಿ ಓಡಿ ಹೋಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಾಲಾ ಆಡಳಿತ ಮಂಡಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಪೊಲೀಸ್ ತನಿಖೆ ಮುಂದುವರಿಯುತ್ತಿದೆ.
ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ವಿದ್ಯಾರ್ಥಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಇದೀಗ, ಮಂಗಳೂರು ಬಾಲಕನ ನಾಪತ್ತೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಪೋಷಕರ ಆತಂಕ ಹೆಚ್ಚಿಸಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು