8:22 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Student Missing | ಪರೀಕ್ಷಾ ಭಯದಿಂದ ಊರು ಬಿಟ್ಟ ಪಿಯು ವಿದ್ಯಾರ್ಥಿ : ರಾಜ್ಯ ಸುತ್ತಾಡಿ ಉಡುಪಿಗೆ ಬಂದು ಸಿಕ್ಕಿಬಿದ್ದ ಫರಂಗಿಪೇಟೆ ದಿಗಂತ್ !

09/03/2025, 16:23

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸಂಶಯಾಸ್ಪದವಾಗಿ ಕಾಣೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್ ಉಡುಪಿಯಲ್ಲಿ ಸಾರ್ವಜನಿಕರಿಗೆ ಸಿಕ್ಕಿದ್ದು, ಪೊಲೀಸರು ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಪೊಲೀಸರ ನಿದ್ದೆಗೆಡಿಸಿದ್ದ ಈ ಪ್ರಕರಣದಿಂದ ನಿಟ್ಟುಸಿರು ಬಿಡುವಂತಾಗಿದೆ. ಹೆತ್ತವರು ಮಗ ಮರಳಿ ಮನೆಗೆ ಬಂದ ಸಂತಸದಲ್ಲಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಓದುತಿದ್ದ ದಿಗಂತ್ ಪರೀಕ್ಷೆಗೆ ಹಾಜರಾಗುವ ಹಾಲ್ ಟಿಕೆಟ್ ಪಡೆದು ಬಳಿಕ ನಿಗೂಢವಾಗಿ ಕಾಣೆಯಾಗಿರುವುದು ಹಲವು ಗೊಂದಲಗಳಿಗೆ ಕಾರಣವಾಗಿತ್ತು. ಪತ್ತೆ ಕಾರ್ಯಕ್ಕೆ ಯಾವುದೇ ಕುರುಹು ಸಿಗಲಿಲ್ಲ. ಈ ಬಗ್ಗೆ ಸಾರ್ಜನಿಕರು ಆತಂಕಕ್ಕೆ ಒಳಗಾಗಿದ್ದು ಮಾತ್ರವಲ್ಲ ವಿಧಾನ ಸಭೆ ಕಲಾಪದಲ್ಲಿ ಜಿಲ್ಲೆಯ ಶಾಸಕರು ಮಾತ್ರವಲ್ಲದೆ ಸಭಾಧ್ಯಕ್ಷರು ಸಹಿತ ಅನೇಕರು ತನಿಖೆ ಶೀಘ್ರವಾಗಿ ಚುರುಕುಗೊಳಿಸುವಂತೆ ಸರಕಾರಕ್ಕೆ ಆಗ್ರಹಿಸಲಾಗಿತ್ತು.
*ಪೊಲೀಸರಿಂದ ವಿಚಾರಣೆ:* ಪೊಲೀಸರ ಮುಂದೆ ಸತ್ಯವನ್ನೇ ಹೇಳುತ್ತೇನೆ ಎಂದು‌‌ ಎಲ್ಲವನ್ನೂ ಇದೀಗ ಬಾಯಿ ಬಿಟ್ಟಿದ್ದಾನೆ ದಿಗಂತ್.
ಕಾಣೆಯಾದ ದಿನವೇ ಫೆ.25ರಂದು ಊರು ಬಿಟ್ಟು ಮೈಸೂರು ಸೇರಿದ.ಅಲ್ಲಿಂದ ಬೆಂಗಳೂರು ತೆರಳಿ ಒಂದೆರಡು ದಿನ ತಿರುಗಾಡಿದ್ದಾನೆ.ಬಳಿಕ ರೆಸಾರ್ಟ್ ಒಂದರಲ್ಲಿ ಕೆಲಸಕ್ಕೂ ಸೇರಿದ್ದು ಮೂರು ದಿನ ಬಳಿಕ ಹಣ ಪಡೆದು‌ ಅಲ್ಲಿಂದ ಶಿವಮೊಗ್ಗಕ್ಕೆ ತೆರಳಿ ಮತ್ತೆ ಮೈಸೂರಿಗೆ ವಾಪಾಸ್ ಹೋಗಿದ್ದಾನೆ. ಮೈಸೂರಿನಿಂದ ಮತ್ತೆ ಮುರುಡೇಶ್ವರ ಹೋಗುವ ರೈಲು ಹತ್ತಿ ಉಡುಪಿಯಲ್ಲಿ ಇಳಿದಿದ್ದಾನೆ. ಉಡುಪಿಯಲ್ಲಿ ಅತ್ತಿತ್ತ ನೋಡಿ ಡಿಮಾರ್ಟ್ ಗೆ ಪ್ರವೇಶಿಸಿದ್ದಾನೆ. ಅಲ್ಲಿ ತಿರುಗಾಡುತ್ತಿದ್ದ ಈತನನ್ನು ಕಂಡು ಸಂಶಯಗೊಂಡು ವಿಚಾರಣೆ ನಡೆಸಿ ಕಾಣೆಯಾದ ದಿಗಂತ್ ಈತನೇ ಎಂದು ಖಚಿತಪಡಿಸಿಕೊಂಡು ಮಾಹಿತಿ ನೀಡಿದ್ದಾರೆ. ಅಲ್ಲಿನ ಮೇನೇಜರ್ ಈತನ ತಾಯಿಯ ನಂಬರ್ ಪಡೆದು ದಿಗಂತ್ ನಲ್ಲಿ ಮಾತನಾಡಿಸಿದ್ದಾರೆ. ಬಳಿಕ ಪೊಲೀಸರು ಮನೆಯವರಿಗೆ ಒಪ್ಪಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯವನ್ನು ಹೊರಗೆಡಹಿದ್ದಾನೆ.
ಯಾಕೆ ಹೀಗೆ ಮಾಡಿದೆ ಮಾರಾಯ? ಎಂದು ಕೇಳಿದರೆ ಮೊನ್ನೆ ನಡೆದ ಪರೀಕ್ಷೆಯಲ್ಲಿ‌ಅಂಕ ಕಡಿಮೆ ಬಂದಿತ್ತು.ಹಾಗಾಗಿ‌ ಫೈನಲ್ ಪರೀಕ್ಷೆ ಬರೆಯುವುದು ಕಷ್ಟವಾದೀತು‌ ಎಂಬ ಭಯ ದಿಂದ ಹೀಗೆ ಮಾಡಿದೆ ಎಂದು ತನ್ನ ಅಸಹಾಯಕತೆಯನ್ನು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು