2:45 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ದುಷ್ಪರಿಣಾಮಗಳು, ಸೈಬರ್ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಅಗತ್ಯ: ಪಿಎಸ್ಐ ಶಿವನಗೌಡ

10/04/2026, 12:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮಕ್ಕಳೇ ದೇಶದ ಬಹುದೊಡ್ಡ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ನೀಡುವುದರ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಪಾತ್ರರಾಗಬೇಕು. ಮಕ್ಕಳಿಗೆ ಒಳ್ಳೆಯ ಹಾಗೂ ಕೆಟ್ಟದರ ಗುಣಸ್ವಭಾವದ ವ್ಯತ್ಯಾಸದ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವನಗೌಡ ಪಾಟೀಲ್ ಹೇಳಿದರು.
ಆರಕ್ಷಕ ದಿನದ ಅಂಗವಾಗಿ ಮೇಗರವಳ್ಳಿ ಸರ್ಕಾರಿ ಶಾಲೆನಲ್ಲಿ, ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ದುಷ್ಪರಿಣಾಮಗಳು, ರಸ್ತೆ ಸುರಕ್ಷತೆ ಹಾಗೂ ಸೈಬರ್ ಮತ್ತು ರಸ್ತೆ ಸುರಕ್ಷತೆಯ ಕುರಿತು ಮಾಹಿತಿಯನ್ನು ನೀಡಿದರು.
ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರೆ ಅಪರಾಧಗಳಿಗೆ ಪ್ರಾಥಮಿಕ ಹಂತದಲ್ಲಿ ಕಡಿವಾಣ ಹಾಕಲು ಸಾಧ್ಯ, ದೇಶದ ನಾಳಿನ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಕಾನೂನಿನ ಅರಿವು ಹೊಂದುವುದು ಮುಖ್ಯ. ಮಕ್ಕಳಿಗೆ ಕಾನೂನು ಅರಿವಿನ ಮಹತ್ವವನ್ನು ತಿಳಿಸಬೇಕು. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಸಂಚಾರಿ ನಿಯಮದ ಬಗ್ಗೆ ತಿಳಿದುಕೊಳ್ಳಬೇಕು. ವಿದ್ಯಾರ್ಥಿ ದಿಸೆಯಲ್ಲಿ ಸಂವಿಧಾನವನ್ನು ತಿಳಿದು ಕಾನೂನಿಗೆ ಗೌರವ ನೀಡುತ್ತಾ ಜೀವನವನ್ನು ಸುಂದರ ಮತ್ತು ಸಾರ್ಥಕವಾಗಿ ರೂಪಿಸಿಕೊಳ್ಳಬೇಕು. ಕಾನೂನು ಅರಿತು ನಡೆದರೆ ಸಮಸ್ಯೆಗಳನ್ನು ಸರಳವಾಗಿ ನಿಭಾಯಿಸಬಹುದು. ಕಾನೂನಿಗೆ ಗೌರವ ನೀಡಿದರೆ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗುತ್ತದೆ. ಆದ್ದರಿಂದ ಪಠ್ಯದ ಜತೆ ಕಾನೂನು ಅರಿವನ್ನು ಹೊಂದುವುದು ಮುಖ್ಯವಾಗಿದೆ ಎಂದರು. ಇಂದಿನ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇತರ ಅನವಶ್ಯಕ ಕಾರ್ಯಗಳನ್ನು ಮಾಡದೇ ಕೇವಲ ಶಿಕ್ಷಣದತ್ತ ಗಮನ ಹರಿಸಬೇಕು. ಎಲ್ಲರೂ ಕೀಳರಿಮೆ ಬಿಟ್ಟು ಶಿಕ್ಷಣಕ್ಕೆ ಹೆಚ್ಚನ ಮಹತ್ವ ನೀಡಬೇಕು, ಶಾಲಾ ಮಕ್ಕಳು ತಮ್ಮ ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಶೈಕ್ಷಣಿಕ ಪ್ರಗತಿ ಹೊಂದಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು