8:48 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು