12:16 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು