7:59 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು