8:47 AM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು