5:30 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು