9:01 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು