9:17 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು