10:21 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು