2:06 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ

03/05/2024, 23:53

ಸುಬ್ರಹ್ಮಣ್ಯ(reporterkarnataka.com); ಕೇವಲ 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕರೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ದಾರುಣ ಘಟನೆ ಸುಬ್ರಹ್ಮಣ್ಯ ಸಮೀಪ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಹೊಸೋಳಿಕೆ ಪರ್ವತಮುಖಿ ನಿವಾಸಿ ದಿ ಸಾಂತಪ್ಪ ಗೌಡ ಅವರ ಪುತ್ರ ಸೋಮ ಸುಂದರ್ (34) ಮೃತಪಟ್ಟ ದುರ್ದೈವಿ.
ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಅಂಗಲದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ವೇಳೆ ಸೋಮ ಸುಂದರ್ ಅವರಿಗೆ ಸಿಡಿಲು ಬಡಿದಿದೆ. ಮಿಂಚಿತ ಆಘಾತಕ್ಕೆ ಅಸ್ವಸ್ಥಗೊಂಡ ಅವರನ್ನು ತಕ್ಷಣ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದುರೂ ಅವರು ಕೊನೆಯುಸಿರೆಳೆದಿದ್ದಾರೆ. ಸೋಮ ಸುಂದರ್ ಅವರು
ಏ 18 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಮೃತರು ಪತ್ನಿ ತಾಯಿ,ತಂಗಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು