6:08 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ

04/05/2022, 11:06

ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ 

ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ‌ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. 

ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು  ಮ್ಯಾನೇಜಿಂಗ್ ಟ್ರಸ್ಟಿ ಯಜ್ಞೇಶ್ವರ ಭಟ್ ತಿಳಿಸಿದ್ದಾರೆ.

ಕಟೀಲು ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಆಶ್ವತ್ಥಪುರ ಕ್ಷೇತ್ರ ಆಡಳಿತ ಮೊಕ್ತೇಸರ ಎಲ್.ವಿ. ರಘುನಾಥ್ ಭಟ್, ಟ್ರಸ್ಟಿ ಕಿರಣ್ ಮಂಜನಬೈಲ್, ಉಡುಪಿ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚೈತನ್ಯ ಎಂ.ಜಿ., ಸಂಸ್ಕೃತ ವಿದ್ವಾಂಸ ಎ.ವಿದ್ಯನಾಥ ಶಾಸ್ತ್ರಿ ಜೋಶಿ ಭಾಗವಹಿಸುವರು. 

ಬಳಿಕ ಕದ್ರಿ ಯಕ್ಷ ಕೂಟ ವತಿಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ, ಜಿತೇಂದ್ರ ಕುಂದೇಶ್ವರ ಸಂಯೋಜನೆಯಲ್ಲಿ “ಶಶಿಪ್ರಭಾ ಪರಿಣಯ” ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. 
ವೇದಮೂರ್ತಿ
ಶಿವಾನಂದ ಕೆ. ನೇತೃತ್ವದಲ್ಲಿ ಪ್ರಶಸ್ತಿ ಪುರಸ್ಕೃತರ ಪುರ ಮೆರವಣಿಗೆ ನಡೆಯಲಿದೆ. ರಾಜೇಶ್ವರ ಭಟ್, ವಿಷ್ಣು ಮೂರ್ತಿ ಭಟ್, ಛಾಯಾಪತಿ ಕಂಚಿಬೈಲ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು