2:27 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ

04/05/2022, 11:06

ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ 

ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ‌ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. 

ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು  ಮ್ಯಾನೇಜಿಂಗ್ ಟ್ರಸ್ಟಿ ಯಜ್ಞೇಶ್ವರ ಭಟ್ ತಿಳಿಸಿದ್ದಾರೆ.

ಕಟೀಲು ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಆಶ್ವತ್ಥಪುರ ಕ್ಷೇತ್ರ ಆಡಳಿತ ಮೊಕ್ತೇಸರ ಎಲ್.ವಿ. ರಘುನಾಥ್ ಭಟ್, ಟ್ರಸ್ಟಿ ಕಿರಣ್ ಮಂಜನಬೈಲ್, ಉಡುಪಿ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚೈತನ್ಯ ಎಂ.ಜಿ., ಸಂಸ್ಕೃತ ವಿದ್ವಾಂಸ ಎ.ವಿದ್ಯನಾಥ ಶಾಸ್ತ್ರಿ ಜೋಶಿ ಭಾಗವಹಿಸುವರು. 

ಬಳಿಕ ಕದ್ರಿ ಯಕ್ಷ ಕೂಟ ವತಿಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ, ಜಿತೇಂದ್ರ ಕುಂದೇಶ್ವರ ಸಂಯೋಜನೆಯಲ್ಲಿ “ಶಶಿಪ್ರಭಾ ಪರಿಣಯ” ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. 
ವೇದಮೂರ್ತಿ
ಶಿವಾನಂದ ಕೆ. ನೇತೃತ್ವದಲ್ಲಿ ಪ್ರಶಸ್ತಿ ಪುರಸ್ಕೃತರ ಪುರ ಮೆರವಣಿಗೆ ನಡೆಯಲಿದೆ. ರಾಜೇಶ್ವರ ಭಟ್, ವಿಷ್ಣು ಮೂರ್ತಿ ಭಟ್, ಛಾಯಾಪತಿ ಕಂಚಿಬೈಲ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು