5:34 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ

04/05/2022, 11:06

ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ 

ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ‌ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. 

ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು  ಮ್ಯಾನೇಜಿಂಗ್ ಟ್ರಸ್ಟಿ ಯಜ್ಞೇಶ್ವರ ಭಟ್ ತಿಳಿಸಿದ್ದಾರೆ.

ಕಟೀಲು ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಆಶ್ವತ್ಥಪುರ ಕ್ಷೇತ್ರ ಆಡಳಿತ ಮೊಕ್ತೇಸರ ಎಲ್.ವಿ. ರಘುನಾಥ್ ಭಟ್, ಟ್ರಸ್ಟಿ ಕಿರಣ್ ಮಂಜನಬೈಲ್, ಉಡುಪಿ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚೈತನ್ಯ ಎಂ.ಜಿ., ಸಂಸ್ಕೃತ ವಿದ್ವಾಂಸ ಎ.ವಿದ್ಯನಾಥ ಶಾಸ್ತ್ರಿ ಜೋಶಿ ಭಾಗವಹಿಸುವರು. 

ಬಳಿಕ ಕದ್ರಿ ಯಕ್ಷ ಕೂಟ ವತಿಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ, ಜಿತೇಂದ್ರ ಕುಂದೇಶ್ವರ ಸಂಯೋಜನೆಯಲ್ಲಿ “ಶಶಿಪ್ರಭಾ ಪರಿಣಯ” ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. 
ವೇದಮೂರ್ತಿ
ಶಿವಾನಂದ ಕೆ. ನೇತೃತ್ವದಲ್ಲಿ ಪ್ರಶಸ್ತಿ ಪುರಸ್ಕೃತರ ಪುರ ಮೆರವಣಿಗೆ ನಡೆಯಲಿದೆ. ರಾಜೇಶ್ವರ ಭಟ್, ವಿಷ್ಣು ಮೂರ್ತಿ ಭಟ್, ಛಾಯಾಪತಿ ಕಂಚಿಬೈಲ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು