4:45 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ

04/05/2022, 11:06

ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ 

ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ‌ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. 

ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು  ಮ್ಯಾನೇಜಿಂಗ್ ಟ್ರಸ್ಟಿ ಯಜ್ಞೇಶ್ವರ ಭಟ್ ತಿಳಿಸಿದ್ದಾರೆ.

ಕಟೀಲು ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಆಶ್ವತ್ಥಪುರ ಕ್ಷೇತ್ರ ಆಡಳಿತ ಮೊಕ್ತೇಸರ ಎಲ್.ವಿ. ರಘುನಾಥ್ ಭಟ್, ಟ್ರಸ್ಟಿ ಕಿರಣ್ ಮಂಜನಬೈಲ್, ಉಡುಪಿ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚೈತನ್ಯ ಎಂ.ಜಿ., ಸಂಸ್ಕೃತ ವಿದ್ವಾಂಸ ಎ.ವಿದ್ಯನಾಥ ಶಾಸ್ತ್ರಿ ಜೋಶಿ ಭಾಗವಹಿಸುವರು. 

ಬಳಿಕ ಕದ್ರಿ ಯಕ್ಷ ಕೂಟ ವತಿಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ, ಜಿತೇಂದ್ರ ಕುಂದೇಶ್ವರ ಸಂಯೋಜನೆಯಲ್ಲಿ “ಶಶಿಪ್ರಭಾ ಪರಿಣಯ” ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. 
ವೇದಮೂರ್ತಿ
ಶಿವಾನಂದ ಕೆ. ನೇತೃತ್ವದಲ್ಲಿ ಪ್ರಶಸ್ತಿ ಪುರಸ್ಕೃತರ ಪುರ ಮೆರವಣಿಗೆ ನಡೆಯಲಿದೆ. ರಾಜೇಶ್ವರ ಭಟ್, ವಿಷ್ಣು ಮೂರ್ತಿ ಭಟ್, ಛಾಯಾಪತಿ ಕಂಚಿಬೈಲ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು