6:03 AM Wednesday11 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ವೈಭವ: 1008 ವಿಶೇಷ ಪವಮಾನಾಭಿಷೇಕ ಸೇವೆ

14/04/2025, 23:20

ಮಂಗಳೂರು(reporterkarnataka.com): ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಏಪ್ರಿಲ್ 8ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ
ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು.


ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಅದನ್ನು ಹರಿದ್ವಾರದ ವ್ಯಾಸಾಶ್ರಮಕ್ಕೆ ತರಲಾಗಿತ್ತು. ಇದು ಚಾರಿತ್ರಿಕವಾಗಿರುವ ದಾಖಲೆಯಾಗಿದೆ. ಎಲ್ಲಾ ಪವಿತ್ರ ನದಿಗಳ ತೀರ್ಥವನ್ನು ಸ್ವಾಮೀಜಿಯವರ ವೃಂದಾವನದಲ್ಲಿ ಅಭಿಷೇಕ ಮಾಡಲಾಯಿತು. ಇನ್ನು 1008 ಬೆಳ್ಳಿ ನಾಣ್ಯಗಳನ್ನು ಸೇವಾದಾರರಿಗೆ ವಿತರಿಸಲಾಯಿತು. ಆ ಬಳಿಕ ಸ್ವರ್ಣ ಪುಷ್ಪಾರ್ಚನಾ ಕಾರ್ಯಕ್ರಮ ನಡೆಯಿತು. ಮೊದಲಿಗೆ ವೃಂದಾವನದಲ್ಲಿರುವ ಹನುಮಂತ ದೇವರ ಪಾದಗಳಿಗೆ ಸ್ವರ್ಣ ಪುಷ್ಪಾಚನೆ ನಡೆಸಲಾಯಿತು. ಬಳಿಕ ಗುರುಪಾದುಕೆಗೆ ಸ್ವರ್ಣ ಪುಷ್ಪಾಚನೆ ನಡೆಯಿತು. ಆ ಸ್ವರ್ಣ ಪುಷ್ಪಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು. ಆಗಮಿಸಿದ ಎಲ್ಲಾ ಭಕ್ತರಿಗೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಗಂಧ ಪ್ರಸಾದ ನೀಡಲಾಯಿತು. ತಿರುಪತಿ ಲಾಡು, ಫಲವಸ್ತು, ಮಹಿಳೆಯರಿಗೆ ಸೀರೆ, ಗಂಡಸರಿಗೆ ಧೋತಿ, ಹೆಣ್ಣುಮಕ್ಕಳಿಗೆ, ಗಂಡುಮಕ್ಕಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಸುಧೀಂದ್ರ ವೇದಿಕೆಯಲ್ಲಿ ವಿಷ್ಣು ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ, ಸಾಮೂಹಿಕ ದುರ್ಗಾ ನಮಸ್ಕಾರ, ಸಹಸ್ರ ಚಂಡಿಕಾಯಾಗ, ಋತ್ಮಿಕಾ ಯಾಗ, ಗುರುಗುಣಗಾನ, ಭಜನಾ ಕಾರ್ಯಕ್ರಮಗಳು ನಡೆಯಿತು. ಸಂಜೆ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಆರ್ಶೀವಚನ ನೀಡಿದರು. ದೇಶ, ವಿದೇಶದಿಂದ ನಾಲ್ಕು ಸಾವಿರಕ್ಕೂ ಮಿಕ್ಕಿ ಭಕ್ತರು ಈ ಪುಣ್ಯಕಾರ್ಯದಲ್ಲಿ ಭಾಗವಹಿಸಿ ಧನ್ಯರಾದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಟಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು