3:40 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ವೈಭವ: 1008 ವಿಶೇಷ ಪವಮಾನಾಭಿಷೇಕ ಸೇವೆ

14/04/2025, 23:20

ಮಂಗಳೂರು(reporterkarnataka.com): ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಏಪ್ರಿಲ್ 8ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ
ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು.


ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಅದನ್ನು ಹರಿದ್ವಾರದ ವ್ಯಾಸಾಶ್ರಮಕ್ಕೆ ತರಲಾಗಿತ್ತು. ಇದು ಚಾರಿತ್ರಿಕವಾಗಿರುವ ದಾಖಲೆಯಾಗಿದೆ. ಎಲ್ಲಾ ಪವಿತ್ರ ನದಿಗಳ ತೀರ್ಥವನ್ನು ಸ್ವಾಮೀಜಿಯವರ ವೃಂದಾವನದಲ್ಲಿ ಅಭಿಷೇಕ ಮಾಡಲಾಯಿತು. ಇನ್ನು 1008 ಬೆಳ್ಳಿ ನಾಣ್ಯಗಳನ್ನು ಸೇವಾದಾರರಿಗೆ ವಿತರಿಸಲಾಯಿತು. ಆ ಬಳಿಕ ಸ್ವರ್ಣ ಪುಷ್ಪಾರ್ಚನಾ ಕಾರ್ಯಕ್ರಮ ನಡೆಯಿತು. ಮೊದಲಿಗೆ ವೃಂದಾವನದಲ್ಲಿರುವ ಹನುಮಂತ ದೇವರ ಪಾದಗಳಿಗೆ ಸ್ವರ್ಣ ಪುಷ್ಪಾಚನೆ ನಡೆಸಲಾಯಿತು. ಬಳಿಕ ಗುರುಪಾದುಕೆಗೆ ಸ್ವರ್ಣ ಪುಷ್ಪಾಚನೆ ನಡೆಯಿತು. ಆ ಸ್ವರ್ಣ ಪುಷ್ಪಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು. ಆಗಮಿಸಿದ ಎಲ್ಲಾ ಭಕ್ತರಿಗೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಗಂಧ ಪ್ರಸಾದ ನೀಡಲಾಯಿತು. ತಿರುಪತಿ ಲಾಡು, ಫಲವಸ್ತು, ಮಹಿಳೆಯರಿಗೆ ಸೀರೆ, ಗಂಡಸರಿಗೆ ಧೋತಿ, ಹೆಣ್ಣುಮಕ್ಕಳಿಗೆ, ಗಂಡುಮಕ್ಕಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಸುಧೀಂದ್ರ ವೇದಿಕೆಯಲ್ಲಿ ವಿಷ್ಣು ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ, ಸಾಮೂಹಿಕ ದುರ್ಗಾ ನಮಸ್ಕಾರ, ಸಹಸ್ರ ಚಂಡಿಕಾಯಾಗ, ಋತ್ಮಿಕಾ ಯಾಗ, ಗುರುಗುಣಗಾನ, ಭಜನಾ ಕಾರ್ಯಕ್ರಮಗಳು ನಡೆಯಿತು. ಸಂಜೆ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಆರ್ಶೀವಚನ ನೀಡಿದರು. ದೇಶ, ವಿದೇಶದಿಂದ ನಾಲ್ಕು ಸಾವಿರಕ್ಕೂ ಮಿಕ್ಕಿ ಭಕ್ತರು ಈ ಪುಣ್ಯಕಾರ್ಯದಲ್ಲಿ ಭಾಗವಹಿಸಿ ಧನ್ಯರಾದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಟಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು