5:48 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

02/08/2025, 21:38

ಚಿಕ್ಕಮಗಳೂರು(reporterkarnataka.com): ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ಕಾಫಿನಾಡ ಕಳಸದಲ್ಲೂ ಮಾಹಿತಿ ಕಲೆ ಹಾಕಿದ್ದಾರೆ.
ಕಳಸ ತಾಲೂಕಿನ ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಎನ್.ಐ.ಎ. ಅಧಿಕಾರಿಗಳು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿತರ ಮನೆಗೂ ಭೇಟಿ ನೀಡಿದ್ದಾರೆ. ಮರ್ಡರ್ ಪ್ರಕರಣ ಸಂಬಂಧ ಕಳಸ ಸಮೀಪದ ಹೋಂ ಸ್ಟೇ ಒಂದರಲ್ಲಿ ಆರೋಪಿತರೆಲ್ಲರೂ ವಾಸ್ತವ್ಯದ ಅನುಮಾನದ ಹಿನ್ನೆಲೆ ಅಧಿಕಾರಿಗಳು ಭೇಟಿ, ಕೆಲವೊಂದು ಮಾಹಿತಿ ಕಲೆ ಹಾಕಿದ್ದಾರೆ. ಕೊಲೆ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದ ಎಂಟು ಆರೋಪಿಗಳ ಪೈಕಿ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆ ಕಳಸ ಪಟ್ಟಣದವರಾಗಿದ್ದರು. ಕಳಸ ಪಟ್ಟಣದ ರಂಜಿತ್ ಹಾಗೂ ಕೋಟೆಹೊಳೆಯ ನಾಗರಾಜ್ ಎಂಬ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಇಬ್ಬರು ಯುವಕರು ಕಳಸ ಪಟ್ಟಣದಲ್ಲಿ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದರು. ಕುಡಿತದ ಚಟಕ್ಕೆ ಒಳಗಾಗಿದ್ದ ಈ ಇಬ್ಬರು ನಿತ್ಯ ಕುಡಿಯುತ್ತಿದ್ದರು. ಸುಹಾಸ್ ಶೆಟ್ಟಿ ಕೊಲೆಗೂ ಒಂದು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟು ಮಂಗಳೂರು ಸೇರಿಕೊಂಡಿದ್ದರು ಎನ್ನಲಾಗಿತ್ತು.‌ ಕಾಫಿನಾಡ ಈ ಇಬ್ಬರು ಯುವಕರು ಕೊಲೆ ಪ್ರಕರಣದ ಎ2 ಆರೋಪಿಯಾಗಿದ್ದ ನಿಯಾಜ್ ಸ್ನೇಹಿತರಾಗಿದ್ದರು ಎನ್ನಲಾಗಿತ್ತು. ನಿಯಾಜ್ ನ ಸಂಬಂಧಿಕರು ಕಳಸದಲ್ಲಿರುವುದರಿಂದ ಆಗಾಗ ನಿಯಾಜ್ ಕಳಸಕ್ಕೆ ಬರ್ತಿದ್ದ. ಹಾಗಾಗಿ, ಕಳೆದ ಮೂರು ವರ್ಷಗಳಿಂದ ನಿಯಾಜ್, ರಂಜಿತ್ ಹಾಗೂ ನಾಗರಾಜ್ ಸ್ನೇಹಿತರಾಗಿದ್ದರು ಎಂದು ಹೇಳಲಾಗಿತ್ತು. ಅಲ್ಲದೇ ಇವರೆಲ್ಲರೂ ಸೇರಿಕೊಂಡು ಕೊಲೆಗೂ ಮುನ್ನ ತಿಂಗಳ ಹಿಂದೆ ಕಳಸ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡಿದ್ದರಂತೆ. ಈ ಪಾರ್ಟಿ ಮುಗಿಸಿ ರಂಜಿತ್ ಹಾಗೂ ನಾಗರಾಜ್ ಕಳಸದಿಂದ ಮಂಗಳೂರಿಗೆ ಹೋಗಿದ್ದರು ಎಂದು ಹೇಳಲಾಗಿತ್ತು. ಇದೀಗ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಎನ್.ಐ.ಎ. ಅಧಿಕಾರಿಗಳ ಕಳಸಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು