10:16 PM Saturday2 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

02/08/2025, 21:38

ಚಿಕ್ಕಮಗಳೂರು(reporterkarnataka.com): ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ಕಾಫಿನಾಡ ಕಳಸದಲ್ಲೂ ಮಾಹಿತಿ ಕಲೆ ಹಾಕಿದ್ದಾರೆ.
ಕಳಸ ತಾಲೂಕಿನ ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಎನ್.ಐ.ಎ. ಅಧಿಕಾರಿಗಳು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿತರ ಮನೆಗೂ ಭೇಟಿ ನೀಡಿದ್ದಾರೆ. ಮರ್ಡರ್ ಪ್ರಕರಣ ಸಂಬಂಧ ಕಳಸ ಸಮೀಪದ ಹೋಂ ಸ್ಟೇ ಒಂದರಲ್ಲಿ ಆರೋಪಿತರೆಲ್ಲರೂ ವಾಸ್ತವ್ಯದ ಅನುಮಾನದ ಹಿನ್ನೆಲೆ ಅಧಿಕಾರಿಗಳು ಭೇಟಿ, ಕೆಲವೊಂದು ಮಾಹಿತಿ ಕಲೆ ಹಾಕಿದ್ದಾರೆ. ಕೊಲೆ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದ ಎಂಟು ಆರೋಪಿಗಳ ಪೈಕಿ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆ ಕಳಸ ಪಟ್ಟಣದವರಾಗಿದ್ದರು. ಕಳಸ ಪಟ್ಟಣದ ರಂಜಿತ್ ಹಾಗೂ ಕೋಟೆಹೊಳೆಯ ನಾಗರಾಜ್ ಎಂಬ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಇಬ್ಬರು ಯುವಕರು ಕಳಸ ಪಟ್ಟಣದಲ್ಲಿ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದರು. ಕುಡಿತದ ಚಟಕ್ಕೆ ಒಳಗಾಗಿದ್ದ ಈ ಇಬ್ಬರು ನಿತ್ಯ ಕುಡಿಯುತ್ತಿದ್ದರು. ಸುಹಾಸ್ ಶೆಟ್ಟಿ ಕೊಲೆಗೂ ಒಂದು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟು ಮಂಗಳೂರು ಸೇರಿಕೊಂಡಿದ್ದರು ಎನ್ನಲಾಗಿತ್ತು.‌ ಕಾಫಿನಾಡ ಈ ಇಬ್ಬರು ಯುವಕರು ಕೊಲೆ ಪ್ರಕರಣದ ಎ2 ಆರೋಪಿಯಾಗಿದ್ದ ನಿಯಾಜ್ ಸ್ನೇಹಿತರಾಗಿದ್ದರು ಎನ್ನಲಾಗಿತ್ತು. ನಿಯಾಜ್ ನ ಸಂಬಂಧಿಕರು ಕಳಸದಲ್ಲಿರುವುದರಿಂದ ಆಗಾಗ ನಿಯಾಜ್ ಕಳಸಕ್ಕೆ ಬರ್ತಿದ್ದ. ಹಾಗಾಗಿ, ಕಳೆದ ಮೂರು ವರ್ಷಗಳಿಂದ ನಿಯಾಜ್, ರಂಜಿತ್ ಹಾಗೂ ನಾಗರಾಜ್ ಸ್ನೇಹಿತರಾಗಿದ್ದರು ಎಂದು ಹೇಳಲಾಗಿತ್ತು. ಅಲ್ಲದೇ ಇವರೆಲ್ಲರೂ ಸೇರಿಕೊಂಡು ಕೊಲೆಗೂ ಮುನ್ನ ತಿಂಗಳ ಹಿಂದೆ ಕಳಸ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡಿದ್ದರಂತೆ. ಈ ಪಾರ್ಟಿ ಮುಗಿಸಿ ರಂಜಿತ್ ಹಾಗೂ ನಾಗರಾಜ್ ಕಳಸದಿಂದ ಮಂಗಳೂರಿಗೆ ಹೋಗಿದ್ದರು ಎಂದು ಹೇಳಲಾಗಿತ್ತು. ಇದೀಗ ಕೊಲೆ ಪ್ರಕರಣ ಸಂಬಂಧ ಎನ್.ಐ.ಎ. ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಎನ್.ಐ.ಎ. ಅಧಿಕಾರಿಗಳ ಕಳಸಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು