12:00 PM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

Sulia | ಪೆರಾಜೆ: ಕೆರಳಿದ ಕಣಜದ ಹಿಂಡು ಕಚ್ಚಿ ತೀವ್ರ ಗಾಯಗೊಂಡಿದ್ದ ಕೃಷಿಕ ಆಸ್ಪತ್ರೆಯಲ್ಲಿ ಸಾವು

22/05/2026, 18:04

ಸುಳ್ಯ(reporterkarnataka.com): ಅರಂತೋಡು ಸಮೀಪದ ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ಕಣಜದ ಹುಳುಗಳ ಹಿಂಡು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕೃಷಿ ತೋಟದಲ್ಲಿ ಕೆಲಸ ನಿರತರಾಗಿದ್ದ ಜಗದೀಶ್ ಎಂಬುವವರೇ ಈ ಕಣಜದ ಹುಳುಗಳ ಭೀಕರ ದಾಳಿಗೆ ಸಿಲುಕಿ ಅಕಾಲಿಕ ಮರಣ ಹೊಂದಿದ ದುರ್ದೈವಿಯಾಗಿದ್ದಾರೆ. ಮೃತ ಜಗದೀಶ್ ಅವರು ತಮ್ಮ ತೋಟದ ಜಾಗದಲ್ಲಿ ಕಳೆ ಕಟಾವು ಯಂತ್ರದ (ಗ್ರಾಸ್ ಕಟ್ಟರ್) ಸಹಾಯದಿಂದ ಕಾಡು ಮತ್ತು ಅನಗತ್ಯ ಗಿಡಗಂಟಿಗಳನ್ನು ಕಡಿಯುವ ಕಾಯಕದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪೊದೆಯಲ್ಲಿದ್ದ ಕಣಜದ ಗೂಡಿಗೆ ಯಂತ್ರವು ತಗುಲಿದ ಪರಿಣಾಮ ಕೆರಳಿದ ನೂರಾರು ಕಣಜದ ಹುಳುಗಳ ಗುಂಪು ಒಮ್ಮೆಲೇ ಜಗದೀಶ್ ಅವರ ಮೇಲೆರಗಿ ದೇಹದಾದ್ಯಂತ ಮನಬಂದಂತೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿವೆ.
ದಾಳಿಯಿಂದಾಗಿ ತೀವ್ರ ಅಸ್ವಸ್ಥಗೊಂಡು ಜಾಗದಲ್ಲೇ ಕುಸಿದು ಬಿದ್ದಿದ್ದ ಇವರನ್ನು ತೋಟದ ಬಳಿಯಿದ್ದ ಸ್ಥಳೀಯರು ಗಮನಿಸಿ, ಕೂಡಲೇ ರಕ್ಷಣೆಗೆ ಧಾವಿಸಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತುರ್ತಾಗಿ ದಾಖಲಿಸಿದ್ದರು. ಆದರೆ ದೇಹದಾದ್ಯಂತ ಕಣಜದ ವಿಷದ ಪ್ರಭಾವ ತೀವ್ರವಾಗಿದ್ದರಿಂದ ಆಸ್ಪತ್ರೆಯಲ್ಲಿ ನೀಡಿದ ಯಾವುದೇ ಚಿಕಿತ್ಸೆಗಳು ಫಲಕಾರಿಯಾಗದೆ ಜಗದೀಶ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು