9:42 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸುಲಿಗೆ, ಮನೆ, ವಾಹನ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ

07/08/2022, 19:26

ಉಡುಪಿ(Reporterkarnataka.com):
ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಬಜ್ಪೆ ಕುರ್ಸುಗುಡ್ಡೆ ನಿವಾಸಿ ಮಹಮ್ಮದ್ ಆರೀಫ್ ಅಲಿಯಾಸ್ ಮುನ್ನ (37), ಮಹಮ್ಮದ್ ಮುನೀರ್ (24) ಮತ್ತು ಅಕ್ಬರ್ (36) ಎಂದು ಗುರುತಿಸಲಾಗಿದೆ.

ವೃದ್ದೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ, ಉಚ್ಚಿಲ ಪಣಿಯೂರು ಹೋಗುವ ದಾರಿಯಲ್ಲಿರುವ ಮನೆಯೊಂದರಿಂದ ರೂಪಾಯಿ 2,52,000/- ಹಣ ಕಳವು, ಪಡುಬಿದ್ರಿ, ಉಚ್ಚಿಲ, ಕಟಪಾಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಡುಬಿದ್ರಿ ಮತ್ತು ಕಾಪು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದವು.

ಕಾಪು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ‌ ಯಶಸ್ವೀ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಆರೋಪಿಗಳಾದ ಮಹಮ್ಮದ್ ಆರೀಫ್‌ ಅಲಿಯಾಸ್ ಮುನ್ನ, ಮಹಮ್ಮದ್ ಮುನೀರ್ ಮತ್ತು ಅಕ್ಬರ್‌ ಎಂಬವರನ್ನು ಬಂಧಿಸಿ, 2 ½ ಪವನ್ ತೂಕದ ಚಿನ್ನದ ಸರ, ಮೊಬೈಲ್ ಪೋನ್-1, ನಗದು ರೂಪಾಯಿ 61,000/-, ಕಳವು ಮಾಡಿದ 3 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ-1, ಮೋಟಾರು ಸೈಕಲ್ -1 ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 2,99 ಲಕ್ಷ ರೂ. ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು