10:07 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಸುಲಿಗೆ, ಮನೆ, ವಾಹನ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ

07/08/2022, 19:26

ಉಡುಪಿ(Reporterkarnataka.com):
ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಬಜ್ಪೆ ಕುರ್ಸುಗುಡ್ಡೆ ನಿವಾಸಿ ಮಹಮ್ಮದ್ ಆರೀಫ್ ಅಲಿಯಾಸ್ ಮುನ್ನ (37), ಮಹಮ್ಮದ್ ಮುನೀರ್ (24) ಮತ್ತು ಅಕ್ಬರ್ (36) ಎಂದು ಗುರುತಿಸಲಾಗಿದೆ.

ವೃದ್ದೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ, ಉಚ್ಚಿಲ ಪಣಿಯೂರು ಹೋಗುವ ದಾರಿಯಲ್ಲಿರುವ ಮನೆಯೊಂದರಿಂದ ರೂಪಾಯಿ 2,52,000/- ಹಣ ಕಳವು, ಪಡುಬಿದ್ರಿ, ಉಚ್ಚಿಲ, ಕಟಪಾಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಡುಬಿದ್ರಿ ಮತ್ತು ಕಾಪು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದವು.

ಕಾಪು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ‌ ಯಶಸ್ವೀ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಆರೋಪಿಗಳಾದ ಮಹಮ್ಮದ್ ಆರೀಫ್‌ ಅಲಿಯಾಸ್ ಮುನ್ನ, ಮಹಮ್ಮದ್ ಮುನೀರ್ ಮತ್ತು ಅಕ್ಬರ್‌ ಎಂಬವರನ್ನು ಬಂಧಿಸಿ, 2 ½ ಪವನ್ ತೂಕದ ಚಿನ್ನದ ಸರ, ಮೊಬೈಲ್ ಪೋನ್-1, ನಗದು ರೂಪಾಯಿ 61,000/-, ಕಳವು ಮಾಡಿದ 3 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ-1, ಮೋಟಾರು ಸೈಕಲ್ -1 ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 2,99 ಲಕ್ಷ ರೂ. ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು