5:00 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಸುಲಿಗೆ ಪ್ರಕರಣ: ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಆರೋಪಿ ಬಂಧನ

18/06/2023, 13:05

ಮಂಗಳೂರು(reporterkarnataka.com): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಲಿಗೆ ಪ್ರಕರಣದ ಆರೋಪಿ ನಿಹಾಲ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
ಬೈಕಂಪಾಡಿ ರೈಲ್ವೇ ಟ್ರ್ಯಾಕ್ ಎಂಬಲ್ಲಿ ಚಿನ್ನದ ಸರ ಮತ್ತು ಮೊಬೈಲ್ ಪೋನ್ ಸುಲಿಗೆ ಮಾಡಿದ್ದ ಆರೋಪಿಗಳ ಪೈಕಿ ನಿಹಾಲ್ ನನ್ನು ಬಂಧಿಸಲಾಗಿದೆ.
ಮಂಗಳೂರು ತಾಲೂಕು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ರವರ ನೇತ್ರತ್ವದ ಪೊಲೀಸ್ ತಂಡ ಪತ್ತೆ ಮಾಡಿ ರೂಪಾಯಿ 35,000/- ಮೌಲ್ಯದ ಸುಮಾರು 5,95 ಗ್ರಾಂ ತೂಕದ ಚಿನ್ನದ ಸರ ಹಾಗೂ ರೂಪಾಯಿ 10,000/- ಮೌಲ್ಯದ ಮೊಬೈಲ್ ಪೋನ್ ಸೇರಿದಂತೆ ಒಟ್ಟು 45,000/-ಮೌಲ್ಯದ ಸ್ವತ್ತುಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿಯು ಈ ಪ್ರಕರಣದ ದೂರುದಾರರ ಮಗ ಪರಿಚಯದ ವ್ಯಕ್ತಿಯಾಗಿದ್ದು, ದೂರದಾರರ ಮಗನನ್ನು ಬೈಕಂಪಾಡಿ ಹತ್ತಿರದ ರೈಲ್ವೇ ಟ್ರಾಕ್ ಗೆ ಫೋನ್ ಮಾಡಿ ಕರೆಸಿಕೊಂಡು ಆತನ ಸ್ನೇಹಿತ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕನೊಂದಿಗೆ ಸೇರಿ ದೂದುದಾರರನ ಮಗನ ಕಣ್ಣಿಗೆ ಮೆಣಸಿನ ಹುಡಿ ಎರಚಿ ಅವನ ಮೊಬೈಲ್ ಮತ್ತು ಚಿನ್ನದ ಸರವನ್ನು ಸುಲಿಗೆ ನಡೆಸಿರುತ್ತಾನೆ. ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು
ಪೊಲೀಸು ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ನಿರ್ದೇಶನದಂತೆ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್, ದಿನೇಶ್ ಕುಮಾರ್ ಬಾರಿಕೆ, ಸಹಾಯಕ ಪೊಲೀಸ್ ಆಯುಕ್ತ
ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪೊಲೀಸ್‌ ಉಪ ನಿರೀಕ್ಷಕ
ಕುಮಾರೇಶನ್, ಜ್ಞಾನಶೇಖರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು