11:31 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸುಲಿಗೆ ಪ್ರಕರಣ: ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಆರೋಪಿ ಬಂಧನ

18/06/2023, 13:05

ಮಂಗಳೂರು(reporterkarnataka.com): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪಣಂಬೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡ ನಡೆಸಿದ ಕಾರ್ಯಚರಣೆಯಲ್ಲಿ ಸುಲಿಗೆ ಪ್ರಕರಣದ ಆರೋಪಿ ನಿಹಾಲ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
ಬೈಕಂಪಾಡಿ ರೈಲ್ವೇ ಟ್ರ್ಯಾಕ್ ಎಂಬಲ್ಲಿ ಚಿನ್ನದ ಸರ ಮತ್ತು ಮೊಬೈಲ್ ಪೋನ್ ಸುಲಿಗೆ ಮಾಡಿದ್ದ ಆರೋಪಿಗಳ ಪೈಕಿ ನಿಹಾಲ್ ನನ್ನು ಬಂಧಿಸಲಾಗಿದೆ.
ಮಂಗಳೂರು ತಾಲೂಕು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ರವರ ನೇತ್ರತ್ವದ ಪೊಲೀಸ್ ತಂಡ ಪತ್ತೆ ಮಾಡಿ ರೂಪಾಯಿ 35,000/- ಮೌಲ್ಯದ ಸುಮಾರು 5,95 ಗ್ರಾಂ ತೂಕದ ಚಿನ್ನದ ಸರ ಹಾಗೂ ರೂಪಾಯಿ 10,000/- ಮೌಲ್ಯದ ಮೊಬೈಲ್ ಪೋನ್ ಸೇರಿದಂತೆ ಒಟ್ಟು 45,000/-ಮೌಲ್ಯದ ಸ್ವತ್ತುಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿಯು ಈ ಪ್ರಕರಣದ ದೂರುದಾರರ ಮಗ ಪರಿಚಯದ ವ್ಯಕ್ತಿಯಾಗಿದ್ದು, ದೂರದಾರರ ಮಗನನ್ನು ಬೈಕಂಪಾಡಿ ಹತ್ತಿರದ ರೈಲ್ವೇ ಟ್ರಾಕ್ ಗೆ ಫೋನ್ ಮಾಡಿ ಕರೆಸಿಕೊಂಡು ಆತನ ಸ್ನೇಹಿತ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕನೊಂದಿಗೆ ಸೇರಿ ದೂದುದಾರರನ ಮಗನ ಕಣ್ಣಿಗೆ ಮೆಣಸಿನ ಹುಡಿ ಎರಚಿ ಅವನ ಮೊಬೈಲ್ ಮತ್ತು ಚಿನ್ನದ ಸರವನ್ನು ಸುಲಿಗೆ ನಡೆಸಿರುತ್ತಾನೆ. ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು
ಪೊಲೀಸು ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ನಿರ್ದೇಶನದಂತೆ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್, ದಿನೇಶ್ ಕುಮಾರ್ ಬಾರಿಕೆ, ಸಹಾಯಕ ಪೊಲೀಸ್ ಆಯುಕ್ತ
ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪೊಲೀಸ್‌ ಉಪ ನಿರೀಕ್ಷಕ
ಕುಮಾರೇಶನ್, ಜ್ಞಾನಶೇಖರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು