3:22 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಸುಲಿಗೆ ಪ್ರಕರಣ: ಆಕಾಶಭವನ ಶರಣ್ ಸೇರಿದಂತೆ 4 ಮಂದಿ ಬಂಧನ; ಸಿಸಿಬಿ ಪೊಲೀಸರ ಕಾರ್ಯಾಚರಣೆ

14/01/2022, 19:19

ಮಂಗಳೂರು(reporterkarnataka.com) : ಇತ್ತೀಚೆಗಷ್ಟೇ ಜಾಮೀನು ಮೇಲೆ ಬಿಡುಗಡೆಗೊಂಡಿರುವ ಆಕಾಶಭವನ ಶರಣ್ ಹಾಗೂ ಇತರ ನಾಲ್ವರನ್ನು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೊಲೆ, ಕೊಲೆ ಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶರಣ್ ನನ್ನು ಬಂಧಿಸಲಾಗಿತ್ತು. 2 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಸುರತ್ಕಲ್ ಸಮೀಪದ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ  ಡಿಸೆಂಬರ್ 8ರಂದು ರಾತ್ರಿ  ವೇಳೆ ಹಳೆಯಂಗಡಿ ನಿವಾಸಿಯೊಬ್ಬರು ತನ್ನ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಮೊಬೈಲ್ ಫೋನ್, 3000 ರೂ. ನಗದು ಹಾಗೂ ಕೆಎ-19-ಹೆಚ್ ಎ-3016 ನೇ ಟಿವಿಎಸ್ ದ್ವಿಚಕ್ರವನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಪ್ರಕರಣಗಳಲ್ಲಿ ಭಾಗಿಯಾದ ಶರಣ್ ಆಕಾಶಭವನ(38), ಕಂಕನಾಡಿಯ ಅನಿಲ್ ಕುಮಾರ್ ಸಾಲ್ಯಾನ್ (40), ಬಜ್ಪೆಯ ಸೈನಾಲ್ ಡಿ ಸೋಜಾ (22), ಬಂಟ್ವಾಳ ಫರಂಗಿಪೇಟೆಯ ಪ್ರಸಾದ್(39), ಜೆಪ್ಪಿನಮೊಗರಿನ ಚೇತನ್ ಕೊಟ್ಟಾರಿ (35) ಎನ್ನುವವರನ್ನು ಬಂಧಿಸಲಾಗಿದೆ. ಈ ಕೃತ್ಯಕ್ಕೆ ಉಪಯೋಗಿಸಿದ ಬಿಳಿ ಬಣ್ಣದ ಮಹೇಂದ್ರ ಎಕ್ಸ್ ಯುವಿ ಕಾರು, 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು