11:34 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸುಳ್ಯ: ಆಂಧ್ರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

25/04/2026, 23:34

ಸುಳ್ಯ(reporterkarnataka.com): ಆಂದ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಅಪರಾಧಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
2012, ಜನವರಿ 31ರಂದು ಕಡಬ ಠಾಣಾ ವ್ಯಾಪ್ತಿಯ ಪುತ್ತೂರು, ಕೊಂಬಾರು ಗ್ರಾಮದ ಅಮೈತಡ್ಕ ಎಂಬಲ್ಲಿ, ಸಾರ್ವಜನಿಕ ರಸ್ತೆಯ ಸಮೀಪ ಮೋರಿಯ ಅಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ, ಕಡಬ ಪೊಲೀಸ್ ಠಾಣೆಯಲ್ಲಿ ಅ. ಕ್ರ : 15/2012, ಕಲಂ : 302.201 R/W 34 ಐ.ಪಿ.ಸಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ ಆಗಿನ ತನಿಖಾಧಿಕಾರಿಗಳಾಗಿದ್ದ ಎಂ.ಎನ್. ಅನುಚೇತ್ ಅವರು, ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿತನಾಗಿದ್ದ ಸುಳ್ಯ ಅಜ್ಜಾವರ ನಿವಾಸಿ ಎನ್. ಎಂ. ಅಬ್ದುಲ್ ಅಜೀಜ್ (30) ಎಂಬಾತನ ವಿರುದ್ದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಾಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ವಿಜಯ್ ಕುಮಾರ್ ಎ ಪಾಟೀಲ್ ಅವರು ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ.2,೦೦,೦೦೦/- ದಂಡವನ್ನು ಪಾವತಿಸುವಂತೆ ಅದೇಶಿಸಿರುತ್ತದೆ. ಸರ್ಕಾರಿ ಅಭಿಯೋಜಕರಾಗಿದ್ದ ಕೆ.ಪಿ ಯಶೋಧ ರವರು ಮಾನ್ಯ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ.
ಅಪರಾಧಿಯು ಶಿಕ್ಷೆ ಪ್ರಕಟವಾದ ಬಳಿಕ ದಸ್ತಗಿರಿಗೆ ಸಿಗದೇ, ತಲೆಮರೆಸಿಕೊಂಡಿದ್ದಾತನನ್ನು ಕಡಬ ಪೊಲೀಸ್ ಉಪನೀರಿಕ್ಷಕರಾದ ಜಂಬುರಾಜ್ ಮಹಾಜನ್ ಮತ್ತು ಠಾಣಾ ಸಿಬ್ಬಂದಿಗಳು ಆಂಧ್ರಪ್ರದೇಶದಲ್ಲಿ ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು