4:46 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಸುಳ್ಯ | ಸಂಪಾಜೆ: ಮದ್ಯದ ಅಮಲಿನಲ್ಲಿ ಹೆದ್ದಾರಿ ಬದಿಯಲ್ಲಿದ್ದ ಕಾನ್ವೆಕ್ಸ್ ಮಿರರನ್ನೇ ಕದ್ದೊಯ್ದ ಕಳ್ಳರು

26/07/2026, 16:45

ಸುಳ್ಯ(reporterkarnataka.com): ಸಂಪಾಜೆ ಗ್ರಾಮದ ಚಡಾವಿನಲ್ಲಿ ಹೆದ್ದಾರಿ ಬಳಿ ಅಪಘಾತ ತಪ್ಪಿಸಲು ಇಟ್ಟಿರುವ ಕನ್ನಡಿಯನ್ನು ತಡರಾತ್ರಿ ದುಷ್ಕರ್ಮಿಗಳು ಕಾರಲ್ಲಿ ಬಂದು ಕದ್ದೊಯ್ದ ಮಾಹಿತಿ ತಿಳಿದ ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ಕಳ್ಳರನ್ನು ಪತ್ತೆ ಹಚ್ಚಿ ಅವರಿಂದಲೇ ಮರು ಜೋಡಣೆ ಮಾಡಿಸಿದ ಘಟನೆ ನಡೆದಿದೆ.
ಕಳ್ಳತನ ಮಾಡಿದವರು ಪುತ್ತೂರು ಮೂಲದ ಶ್ರೇಯಸ್ ಕುಮಾರ್ ಮತ್ತು ಪ್ರೀತಮ್ ರೈ ಎಂದು ತಿಳಿದು ಬಂದಿದ್ದು ಕುಡಿದ ಅಮಲಿನಲ್ಲಿ ಈ ಕೃತ್ಯ ಮಾಡಿದ್ದಾರೆ ಎಂದು ಪೊಲೀಸ್ ತನಿಖೆಯ ಬಳಿಕ ತಿಳಿದು ಬಂದಿದೆ.
ಇವರಿಬ್ಬರು ಪುತ್ತೂರಿನಿಂದ ಮಡಿಕೇರಿ ಕಡೆಗೆ ಸುತ್ತಾಡಲು ಕಾರಿನಲ್ಲಿ ಹೋಗುತ್ತಿದ್ದಾಗ ರಾತ್ರಿ ಸಮಯ ರಸ್ತೆ ಬದಿ ಇದ್ದ ಈ ಕನ್ನಡಿಯನ್ನು ಬಿಚ್ಚಿ ಅವರು ಬಂದಿದ್ದ ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ಹೋಗಿ ಮಡಿಕೇರಿ ರಾಜಾಸೀಟ್ ಮೊದಲಾದ ಕಡೆ ಸುತ್ತಿ ಮತ್ತೆ ಪುತ್ತೂರಿಗೆ ಇದೇ ರಸ್ತೆ ಮೂಲಕ ತೆರಳಿದ್ದಾರೆ.
ಮಾರನೇ ದಿನ ಸ್ಥಳೀಯರು ರಸ್ತೆ ಬದಿ ಇದ್ದ ಕನ್ನಡಿ ಕಾಣದೇ ಇರುವ ಕಾರಣ ಪಕ್ಕದ ಮನೆಯ ಸಿ ಸಿ ಟಿವಿಯಲ್ಲಿ ಪರಿಶೀಲನೆ ನಡೆಸಿದಾಗ ಇಬ್ಬರು ಯುವಕರು ಕಳ್ಳತನ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಳಿಕ ವಿವರ ಪೊಲೀಸರ ಗಮನಕ್ಕೆ ಸ್ಥಳೀಯರು ನೀಡಿದ್ದಾರೆ.
ಪೊಲೀಸರು ಸಿಸಿ ಟಿವಿಯ ದೃಶ್ಯ ವನ್ನು ಆಧರಿಸಿ ತನಿಖೆ ಕೈಗೊಂಡು ಘಟನೆಗೆ ಬಳಸಿದ ಕಾರಿನ ನಂಬರ್ ಬೋರ್ಡ್ ಸಹಾಯದಿಂದ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಬಳಿಕ ಅವರ ದೂರವಾಣಿ ನಂಬರ್ ಪಡೆದು ಅವರನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ ಮದ್ಯದ ಅಮಲಿನಲ್ಲಿ ಈ ಕೃತ್ಯವನ್ನು ಮಾಡಿರುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಪೊಲೀಸರು ಕಳ್ಳತನ ಮಾಡಿದವರಿಂದಲೇ ಕನ್ನಡಿಯನ್ನು ಮರು ಜೋಡಿಸುವ ಕೆಲಸ ಮಾಡಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು