2:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಕಾದಿದೆ ಗ್ರಹಚಾರ: ತನಿಖೆಗೆ ರಾಜ್ಯ ಸರಕಾರ ಆದೇಶ

25/04/2022, 15:30

ಬೆಂಗಳೂರು(reporterkarnataka.com): ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಮುಂದೆ ಕಾದಿದೆ ಗ್ರಹಚಾರ. ಕೆಲಸ ವಜಾಗೊಳ್ಳುವುದಲ್ಲದೆ, ಜೈಲು ಶಿಕ್ಷೆಯೂ ಆಗಲಿದೆ.

ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಹೀಗೆ ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣಪತ್ರವನ್ನು ಪಡೆದಿರುವ ಕುರಿತಂತೆ ಮಾಹಿತಿ ಸಂಗ್ರಹಿಸಿ ನೀಡಲು ಆದೇಶಿಸಿದೆ.

ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ.

ಅಲ್ಲದೇ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಗಳನ್ನು ನೀಡಿರುವ ಅಧಿಕಾರಿ, ನೌಕರರನ್ನು ಕೂಡಲೇ ಅಮಾನತುಗೊಳಿಸಲು, ವಾರ್ಷಿಕ ವೇತನ ಬಡ್ತಿಗಳನ್ನು ಕಡಿತಗೊಳಿಸಲು ಹಾಗೂ ಆಂತಹ ಅಧಿಕಾರಿಗಳ ಸೇವಾ ವಹಿಯಲ್ಲಿ ನಮೂದಿಸಲು ತಿಳಿಸಿರುತ್ತಾರೆ.

ಹೀಗಾಗಿ 2010ರಿಂದ ಇಲ್ಲಿಯವರೆಗೆ ಬೇಡ ಜಂಗಮ ಜಾತಿಯ ಎಷ್ಟು ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ನೀಡುವುದು. ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕುಗಳಲ್ಲಿ ಬೇಡ ಜಂಗಮ ಪ್ರಮಾಣ ಪತ್ರಗಳನ್ನು ನೀಡಿದವರುಗಳ ಹಾಗೂ ಪಡೆದುಕೊಂಡಿರುವವರ ವಿವರಗಳನ್ನು ಮತ್ತು ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಕ್ರೂಡೀಕರಿಸಿ, ಮರು ಟಪಾಲಿನಲ್ಲಿ ಸರ್ಕಾರಕ್ಕೆ ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು