4:52 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಕಾದಿದೆ ಗ್ರಹಚಾರ: ತನಿಖೆಗೆ ರಾಜ್ಯ ಸರಕಾರ ಆದೇಶ

25/04/2022, 15:30

ಬೆಂಗಳೂರು(reporterkarnataka.com): ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಮುಂದೆ ಕಾದಿದೆ ಗ್ರಹಚಾರ. ಕೆಲಸ ವಜಾಗೊಳ್ಳುವುದಲ್ಲದೆ, ಜೈಲು ಶಿಕ್ಷೆಯೂ ಆಗಲಿದೆ.

ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಹೀಗೆ ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣಪತ್ರವನ್ನು ಪಡೆದಿರುವ ಕುರಿತಂತೆ ಮಾಹಿತಿ ಸಂಗ್ರಹಿಸಿ ನೀಡಲು ಆದೇಶಿಸಿದೆ.

ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ.

ಅಲ್ಲದೇ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಗಳನ್ನು ನೀಡಿರುವ ಅಧಿಕಾರಿ, ನೌಕರರನ್ನು ಕೂಡಲೇ ಅಮಾನತುಗೊಳಿಸಲು, ವಾರ್ಷಿಕ ವೇತನ ಬಡ್ತಿಗಳನ್ನು ಕಡಿತಗೊಳಿಸಲು ಹಾಗೂ ಆಂತಹ ಅಧಿಕಾರಿಗಳ ಸೇವಾ ವಹಿಯಲ್ಲಿ ನಮೂದಿಸಲು ತಿಳಿಸಿರುತ್ತಾರೆ.

ಹೀಗಾಗಿ 2010ರಿಂದ ಇಲ್ಲಿಯವರೆಗೆ ಬೇಡ ಜಂಗಮ ಜಾತಿಯ ಎಷ್ಟು ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ನೀಡುವುದು. ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕುಗಳಲ್ಲಿ ಬೇಡ ಜಂಗಮ ಪ್ರಮಾಣ ಪತ್ರಗಳನ್ನು ನೀಡಿದವರುಗಳ ಹಾಗೂ ಪಡೆದುಕೊಂಡಿರುವವರ ವಿವರಗಳನ್ನು ಮತ್ತು ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಕ್ರೂಡೀಕರಿಸಿ, ಮರು ಟಪಾಲಿನಲ್ಲಿ ಸರ್ಕಾರಕ್ಕೆ ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು