5:55 PM Sunday9 - November 2025
ಬ್ರೇಕಿಂಗ್ ನ್ಯೂಸ್
ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ

ಇತ್ತೀಚಿನ ಸುದ್ದಿ

ಸುಳ್ಳು ಕೇಸು ದಾಖಲು ಆರೋಪ: ಜೂನ್ 6ರಂದು ಬೃಹತ್ ಮೆರವಣಿಗೆ, ನಗರ ಪಾಲಿಕೆ ಚಲೋ

04/06/2023, 19:31

ಮಂಗಳೂರು(reporterkarnataka.com): ಜನಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸುಳ್ಳು ಕೇಸು ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಜೂನ್ 6ರಂದು ಬೆಳಿಗ್ಗೆ 10ಕ್ಕೆ ನಗರದ ಜೈಲ್ ರೋಡ್ ಬಳಿಯಿಂದ ಲಾಲ್ ಭಾಗ್ ನಗರಪಾಲಿಕೆಯ ಕಚೇರಿ ವರೆಗೆ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ನಡೆಯಲಿದೆ.

ಬಡ ಬೀದಿಬದಿ ವ್ಯಾಪಾರಿಗಳಿಗೆ ಕಾನೂನು ಬದ್ದವಾಗಿ ದೊರಕಿರುವ ಐಡಿ ಕಾರ್ಡ್, ಪ್ರಮಾಣ ಪತ್ರಗಳನ್ನು ವಿತರಿಸದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ದಬ್ಬಾಳಿಕೆ ನಡೆಸಿ ಅವರ ಕನಿಷ್ಠ ಬದುಕುವ ಹಕ್ಕಿನ ಮೇಲೆ ದಾಳಿ ನಡೆಸುತ್ತಿದ್ದಾರೆ. ನಗರಪಾಲಿಕೆಯಲ್ಲಿ 14 ವರ್ಷದ ಹಿಂದೆ ನಿವೃತ್ತಿ ಆಗಿರುವ ಅಧಿಕಾರಿಯನ್ನೇ ಆರೋಗ್ಯ ಅಧಿಕಾರಿಯಾಗಿ ಮುಂದುವರಿಸುತ್ತಿದ್ದಾರೆ, ಆರೋಗ್ಯ ಅಧಿಕಾರಿಗೆ ಕೆಳ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ಪಾಲಿಕೆಯ ಬೀದಿಬದಿ ವ್ಯಾಪಾರದ ಕಾನೂನು, ನಿಯಮಗಳ ಜ್ಞಾನ ಇಲ್ಲ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತ ಬಡ ಬೀದಿ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುತ್ತಿದ್ದಾರೆ. ಅವರ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದರೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಹೋರಾಟಗಾರರ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳ ಮೇಲಿನ ಸುಳ್ಳು ಮೊಕದ್ದಮೆ ವಾಪಸ್ ಪಡೆಯಲು ಒತ್ತಾಯಿಸಿ ನಗರ ಪಾಲಿಕೆ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಬೀದಿ ವ್ಯಾಪಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು