2:44 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಸುಳ್ಳು ಮಾಹಿತಿ ಹರಡಿದ ಆರೋಪ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್​ಐಆರ್ ದಾಖಲು

08/11/2024, 13:00

ಹಾವೇರಿ(reporterjarnataka.com): ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸಂಸದರು ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದರು. ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬರೆದಿದ್ದರು. ರಾಜ್ಯದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಸಂಸದರು ಟ್ವೀಟ್ ಮಾಡಿದ್ದರು.
ರೈತ‌ ರುದ್ರಪ್ಪ ಅವರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಬರೆದಿದ್ದರು. ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಇದೀಗ ಈ ಟ್ವೀಟ್​ ಅನ್ನು ಅಳಿಸಿಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು