1:00 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಸುಳ್ಳು ಪ್ರಮಾಣ ಪತ್ರ ಪ್ರಕರಣ: ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ ಜೈಲು ಶಿಕ್ಷೆ

14/10/2022, 09:47

ಬೆಂಗಳೂರು(reporterkarnataka.com): ಸುಳ್ಳು ಪ್ರಮಾಣ ಪತ್ರ ನೀಡಿದ ಪ ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್​ಗೆ 6 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

2018ರ ಚುನಾವಣೆಯಲ್ಲಿ ಗರುಡಾಚಾರ್ ಅವರು
ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು.
ಗರುಡಾಚಾರ್ 2018 ರಲ್ಲಿ ಚಿಕ್ಕಪೇಟೆ ಚುನಾವಣೆಯ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದರು. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಕ್ರಿಮಿನಲ್ ಕೇಸ್ ಗಳ ಮಾಹಿತಿ ಮುಚ್ಚಿಟ್ಟಿದ್ದರು ಎಂದು ಆರೋಪಿಸಿ ಪ್ರಕಾಶ್ ಶೆಟ್ಟಿ ಎಂಬುವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಉದಯ್ ಗರುಡಾಚಾರ್ ಅವರು ಶಿಕ್ಷೆ ಪ್ರಕಟವಾದ ಬಳಿಕ ಜಾಮೀನುಗಾಗಿ ಮನವಿ ಮಾಡಿದ್ದರು. ಇದನ್ನು ಪರಿಶೀಲಿಸಿದ ಕೋರ್ಟ್ ಜಾಮೀನು ನೀಡಿದೆ. 25,000 ರೂಪಾಯಿ ಬಾಂಡ್, ಶ್ಯುರಿಟಿ ಒದಗಿಸಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು