7:48 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸುಳ್ಯ: 4 ವರ್ಷದ ಮಗು ಜತೆ ಬಾವಿಗೆ ಹಾರಿದ ಗೃಹಿಣಿ; ತಾಯಿ ಸಾವು, ಅದೃಷ್ಟವಶಾತ್ ಕೂಸು ಬಚಾವ್

29/06/2022, 23:11

ಸುಳ್ಯ(reporterkarnataka.com): ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ತಾಯಿಯೊಬ್ಬರು ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿದ್ದು, ಅದೃಷ್ಟವಶಾತ್ ಮಗು ಬದುಕುಳಿದ ಘಟನೆ ನಡೆದಿದೆ.

ಸುಳ್ಯದ ಕಾಲೇಜೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ (34) ಎಂಬವರು ಬುಧವಾರ ಮುಂಜಾನೆ ತನ್ನ 4 ವರ್ಷದ ಮಗಳು ಪೂರ್ವಿಕಾಳೊಂದಿಗೆ ಬಾವಿಗೆ ಹಾರಿದ್ದರೆನ್ನಲಾಗಿದೆ.

ಮುಂಜಾನೆ ಗೀತಾ ಅವರು ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿ ಮನೆಯವರು ಹುಡುಕಾಡಿದಾಗ ಗೀತಾ ಮತ್ತು ಮಗು ಬಾವಿಯಲ್ಲಿ ಬಿದ್ದಿರುವುದು ಕಂಡುಬಂತು. ಮಗು ಪೂರ್ವಿಕಾ ಬಾವಿಯೊಳಗೆ ಇದ್ದ ಕಲ್ಲನ್ನು ಹಿಡಿದುಕೊಂಡು ಬದುಕುಳಿದಿದ್ದು, ತಕ್ಷಣ ಆಕೆಯನ್ನು ಮೇಲಕ್ಕೆತ್ತಿ ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

ಅದಾಗಲೇ ಗೀತಾ ನೀರಲ್ಲಿ ಮುಳುಗಿ ಅಸು ನೀಗಿದ್ದರೆನ್ನಲಾಗಿದೆ. ತೀವ್ರ ಆಘಾತಕ್ಕೊಳಗಾಗಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಮೃತ ಗೀತಾ ಅವರು ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು