4:49 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸುಳ್ಯ: 4 ವರ್ಷದ ಮಗು ಜತೆ ಬಾವಿಗೆ ಹಾರಿದ ಗೃಹಿಣಿ; ತಾಯಿ ಸಾವು, ಅದೃಷ್ಟವಶಾತ್ ಕೂಸು ಬಚಾವ್

29/06/2022, 23:11

ಸುಳ್ಯ(reporterkarnataka.com): ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ತಾಯಿಯೊಬ್ಬರು ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿದ್ದು, ಅದೃಷ್ಟವಶಾತ್ ಮಗು ಬದುಕುಳಿದ ಘಟನೆ ನಡೆದಿದೆ.

ಸುಳ್ಯದ ಕಾಲೇಜೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ (34) ಎಂಬವರು ಬುಧವಾರ ಮುಂಜಾನೆ ತನ್ನ 4 ವರ್ಷದ ಮಗಳು ಪೂರ್ವಿಕಾಳೊಂದಿಗೆ ಬಾವಿಗೆ ಹಾರಿದ್ದರೆನ್ನಲಾಗಿದೆ.

ಮುಂಜಾನೆ ಗೀತಾ ಅವರು ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿ ಮನೆಯವರು ಹುಡುಕಾಡಿದಾಗ ಗೀತಾ ಮತ್ತು ಮಗು ಬಾವಿಯಲ್ಲಿ ಬಿದ್ದಿರುವುದು ಕಂಡುಬಂತು. ಮಗು ಪೂರ್ವಿಕಾ ಬಾವಿಯೊಳಗೆ ಇದ್ದ ಕಲ್ಲನ್ನು ಹಿಡಿದುಕೊಂಡು ಬದುಕುಳಿದಿದ್ದು, ತಕ್ಷಣ ಆಕೆಯನ್ನು ಮೇಲಕ್ಕೆತ್ತಿ ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

ಅದಾಗಲೇ ಗೀತಾ ನೀರಲ್ಲಿ ಮುಳುಗಿ ಅಸು ನೀಗಿದ್ದರೆನ್ನಲಾಗಿದೆ. ತೀವ್ರ ಆಘಾತಕ್ಕೊಳಗಾಗಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಮೃತ ಗೀತಾ ಅವರು ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು