6:36 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ; ಕೇಸು ದಾಖಲು

30/09/2022, 09:46

ಸುಳ್ಯ(reporterkarnataka.com): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಆಕೆ ಗರ್ಭವತಿಯಾದ ಬಳಿಕ ಬೆಳಕಿಗೆ ಬಂದಿದ್ದು,  ಯುವಕನೋರ್ವನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ಸುಳ್ಯದಲ್ಲಿ ನಡೆದಿದೆ.

ಆರೋಪಿಯನ್ನು ಸುಳ್ಯ ತಾಲೂಕಿನ ಉಬರಡ್ಕ ನಿವಾಸಿ ತೀರ್ಥಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಅಪ್ರಾಪ್ತ ಬಾಲಕಿಯೊಂದಿಗೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ನಡೆಸಿದ್ದಾನೆ ಎನ್ನಲಾಗಿದ್ದು, ಬಾಲಕಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಾಟ್ಸಪ್ ಗ್ರೂಪ್ ಒಂದರಲ್ಲಿ ಆರೋಪಿ ತೀರ್ಥಪ್ರಸಾದ್ ಹಾಗೂ ಅಪ್ರಾಪ್ತ ಬಾಲಕಿ ಪರಸ್ಪರ ಪರಿಚಯವಾಗಿದ್ದು, ಬಾಲಕಿಯೊಂದಿಗೆ ಸಲುಗೆ ಬೆಳೆಸಿದ ಆರೋಪಿ ಆಕೆಯನ್ನು ಸುಳ್ಯಕ್ಕೆ ಕರೆಸಿಕೊಂಡಿದ್ದಾನೆ. ಸುಳ್ಯಕ್ಕೆ ಬಂದ ಬಾಲಕಿಯನ್ನು ಕರೆದುಕೊಂಡು ಸ್ನೇಹಿತನ ರೂಮ್ ಗೆ ತೆರಳಿ ಅಲ್ಲಿ ಆಕೆಯ ಜೊತೆ ದೈಹಿಕ ಸಂಪರ್ಕದಲ್ಲೇರ್ಪಟ್ಟಿದ್ದಾನೆ ಎನ್ನಲಾಗಿದೆ.

ಈ ವಿಚಾರವನ್ನು ಯಾರಲ್ಲಿಯೂ ಹೇಳದೆ ಮುಚ್ಚಿಟ್ಟಿದ್ದ ಬಾಲಕಿಗೆ ಕಳೆದ ತಿಂಗಳಿನನಿಂದ ವಿಪರೀತ ಹೊಟ್ಟೆನೋವು ಪ್ರಾರಂಭವಾಗಿದ್ದು, ಪೋಷಕರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಗರ್ಭಿಣಿ ಎನ್ನುವುದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು