7:01 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ; ಕೇಸು ದಾಖಲು

30/09/2022, 09:46

ಸುಳ್ಯ(reporterkarnataka.com): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಆಕೆ ಗರ್ಭವತಿಯಾದ ಬಳಿಕ ಬೆಳಕಿಗೆ ಬಂದಿದ್ದು,  ಯುವಕನೋರ್ವನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ಸುಳ್ಯದಲ್ಲಿ ನಡೆದಿದೆ.

ಆರೋಪಿಯನ್ನು ಸುಳ್ಯ ತಾಲೂಕಿನ ಉಬರಡ್ಕ ನಿವಾಸಿ ತೀರ್ಥಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಅಪ್ರಾಪ್ತ ಬಾಲಕಿಯೊಂದಿಗೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ನಡೆಸಿದ್ದಾನೆ ಎನ್ನಲಾಗಿದ್ದು, ಬಾಲಕಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಾಟ್ಸಪ್ ಗ್ರೂಪ್ ಒಂದರಲ್ಲಿ ಆರೋಪಿ ತೀರ್ಥಪ್ರಸಾದ್ ಹಾಗೂ ಅಪ್ರಾಪ್ತ ಬಾಲಕಿ ಪರಸ್ಪರ ಪರಿಚಯವಾಗಿದ್ದು, ಬಾಲಕಿಯೊಂದಿಗೆ ಸಲುಗೆ ಬೆಳೆಸಿದ ಆರೋಪಿ ಆಕೆಯನ್ನು ಸುಳ್ಯಕ್ಕೆ ಕರೆಸಿಕೊಂಡಿದ್ದಾನೆ. ಸುಳ್ಯಕ್ಕೆ ಬಂದ ಬಾಲಕಿಯನ್ನು ಕರೆದುಕೊಂಡು ಸ್ನೇಹಿತನ ರೂಮ್ ಗೆ ತೆರಳಿ ಅಲ್ಲಿ ಆಕೆಯ ಜೊತೆ ದೈಹಿಕ ಸಂಪರ್ಕದಲ್ಲೇರ್ಪಟ್ಟಿದ್ದಾನೆ ಎನ್ನಲಾಗಿದೆ.

ಈ ವಿಚಾರವನ್ನು ಯಾರಲ್ಲಿಯೂ ಹೇಳದೆ ಮುಚ್ಚಿಟ್ಟಿದ್ದ ಬಾಲಕಿಗೆ ಕಳೆದ ತಿಂಗಳಿನನಿಂದ ವಿಪರೀತ ಹೊಟ್ಟೆನೋವು ಪ್ರಾರಂಭವಾಗಿದ್ದು, ಪೋಷಕರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಗರ್ಭಿಣಿ ಎನ್ನುವುದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು