3:27 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಸುಳ್ಯ: 6 ಬಾರಿ ಗೆದ್ದ ಅಂಗಾರ ಎಲೆಕ್ಷನ್ ಪಾಲಿಟಿಕ್ಸ್ ಗೆ ಗುಡ್ ಬೈ ಹೇಳುತ್ತಾರಾ? ಶಶಿ ಸುಳ್ಳಿ ನೂತನ ಅಭ್ಯರ್ಥಿಯೇ?

09/04/2023, 19:54

ಸುಳ್ಯ(reporterkarnataka.com): ಆರು ಬಾರಿ ಗೆದ್ದು 30 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಸಚಿವ ಅಂಗಾರ ಅವರಿಗೆ ಈ ಬಾರಿ ಕೊಕ್ ನೀಡುವ ಕುರಿತು ಬಿಜೆಪಿಯಲ್ಲಿ ತೀವ್ರ ಚಿಂತನೆ ನಡೆದಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ನಾಯಕರಾಗಿ ಸುಳ್ಯ ಬಿಜೆಪಿಯಿಂದ ಯಾರು ಮೂಡಿ ಬರಲಿದ್ದಾರೆ ಎಂಬ ಕೌತುಕ ಇಡೀ ಕರಾವಳಿಯಲ್ಲಿ ಆವರಿಸಿದೆ.
30 ವರ್ಷಗಳಿಂದ ಒಂದೇ ಪಕ್ಷವನ್ನು ಪ್ರತಿನಿಧಿಸಿ 6 ಬಾರಿ ಶಾಸಕರಾಗಿ, ಕೊನೆಗೂ ಸಚಿವರಾದ ಅಂಗಾರ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳಿಸಲು ಜಿಲ್ಲಾ ಹಾಗೂ ರಾಜ್ಯಮಟ್ಡದ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೊಸ ತಲೆಮಾರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪಕ್ಷ ಈ ಕುರಿತು ಚಿಂತನೆ ನಡೆಸಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ಅಭ್ಯರ್ಥಿ ಯಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಲಿದೆ? ಕಾಂಗ್ರೆಸ್ ತರಹ ಹೊರಗಿನಿಂದ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳಲಿದೆಯೇ? ಅಲ್ಲ, ಸ್ಥಳೀಯ ಅಭ್ಯರ್ಥಿಯನ್ನೇ ಬೆಳೆಸಿ ನಾಯಕನಾಗಿ ಬೆಳೆಸಲಿದಯಾ ? ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರಕುತ್ತದೆ. ಅಕಸ್ಮಾತ್ ಅಂಗಾರ ಅವರ ಅಭ್ಯರ್ಥಿ ತನವನ್ನು ಬದಲಾಯಿಸಿದರೆ ಅವರ ಜಾಗಕ್ಕೆ ಸ್ಥಳೀಯ ವ್ಯಕ್ತಿಯನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗುತ್ತದೆ. ಇಂತಹ ಅಭ್ಯರ್ಥಿ ಗಳಲ್ಲಿ ಪ್ರಮುಖ ಹೆಸರು ಶಶಿಧರ ಸುಳ್ಳಿ ಯಾನೆ ಶಶಿ ಸುಳ್ಳಿ.
ಆರೆಸ್ಸೆಸ್ ಗರಡಿಯಲ್ಲಿ ಪಳಗಿದ ಶಶಿ ಸುಳ್ಳಿ ಎಂಬ ತರುಣನನ್ನು ಮುನ್ನಲೆಗೆ ತರಲು ಆರೆಸ್ಸೆಸ್ ಎಲ್ಲ ಸಿದ್ದತೆ ನಡೆಸಿದೆ ಎನ್ನಲಾಗಿದೆ.
ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಸುಳ್ಳಿ ನಿವಾಸಿ ಶಶಿ ಸುಳ್ಳಿ ಪಿಯುಸಿ ಕಲಿತ ಆಟೋ ಚಾಲಕ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಕಾರ್ಯಕರ್ತ. ಸಂಘದ ಒಟಿಸಿಯನ್ನು ಪೂರೈಸಿದವರು. ಶಾಸಕ ಅಂಗಾರ ಅವರ ಕಾರು ಚಾಲಕನಾಗಿಯೂ ಸೇವೆ ಸಲ್ಲಿಸಿದ್ದಾರೆ. ಆರೆಸ್ಸೆಸ್ ನಾಯಕ ಮೈಚ ಜಯದೇವ ಅವರೊಂದಗೆ ದುಡಿದು ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು