6:59 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಸುಳ್ಯ: 6 ಬಾರಿ ಗೆದ್ದ ಅಂಗಾರ ಎಲೆಕ್ಷನ್ ಪಾಲಿಟಿಕ್ಸ್ ಗೆ ಗುಡ್ ಬೈ ಹೇಳುತ್ತಾರಾ? ಶಶಿ ಸುಳ್ಳಿ ನೂತನ ಅಭ್ಯರ್ಥಿಯೇ?

09/04/2023, 19:54

ಸುಳ್ಯ(reporterkarnataka.com): ಆರು ಬಾರಿ ಗೆದ್ದು 30 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಸಚಿವ ಅಂಗಾರ ಅವರಿಗೆ ಈ ಬಾರಿ ಕೊಕ್ ನೀಡುವ ಕುರಿತು ಬಿಜೆಪಿಯಲ್ಲಿ ತೀವ್ರ ಚಿಂತನೆ ನಡೆದಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ನಾಯಕರಾಗಿ ಸುಳ್ಯ ಬಿಜೆಪಿಯಿಂದ ಯಾರು ಮೂಡಿ ಬರಲಿದ್ದಾರೆ ಎಂಬ ಕೌತುಕ ಇಡೀ ಕರಾವಳಿಯಲ್ಲಿ ಆವರಿಸಿದೆ.
30 ವರ್ಷಗಳಿಂದ ಒಂದೇ ಪಕ್ಷವನ್ನು ಪ್ರತಿನಿಧಿಸಿ 6 ಬಾರಿ ಶಾಸಕರಾಗಿ, ಕೊನೆಗೂ ಸಚಿವರಾದ ಅಂಗಾರ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳಿಸಲು ಜಿಲ್ಲಾ ಹಾಗೂ ರಾಜ್ಯಮಟ್ಡದ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೊಸ ತಲೆಮಾರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪಕ್ಷ ಈ ಕುರಿತು ಚಿಂತನೆ ನಡೆಸಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ಅಭ್ಯರ್ಥಿ ಯಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಲಿದೆ? ಕಾಂಗ್ರೆಸ್ ತರಹ ಹೊರಗಿನಿಂದ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳಲಿದೆಯೇ? ಅಲ್ಲ, ಸ್ಥಳೀಯ ಅಭ್ಯರ್ಥಿಯನ್ನೇ ಬೆಳೆಸಿ ನಾಯಕನಾಗಿ ಬೆಳೆಸಲಿದಯಾ ? ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರಕುತ್ತದೆ. ಅಕಸ್ಮಾತ್ ಅಂಗಾರ ಅವರ ಅಭ್ಯರ್ಥಿ ತನವನ್ನು ಬದಲಾಯಿಸಿದರೆ ಅವರ ಜಾಗಕ್ಕೆ ಸ್ಥಳೀಯ ವ್ಯಕ್ತಿಯನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗುತ್ತದೆ. ಇಂತಹ ಅಭ್ಯರ್ಥಿ ಗಳಲ್ಲಿ ಪ್ರಮುಖ ಹೆಸರು ಶಶಿಧರ ಸುಳ್ಳಿ ಯಾನೆ ಶಶಿ ಸುಳ್ಳಿ.
ಆರೆಸ್ಸೆಸ್ ಗರಡಿಯಲ್ಲಿ ಪಳಗಿದ ಶಶಿ ಸುಳ್ಳಿ ಎಂಬ ತರುಣನನ್ನು ಮುನ್ನಲೆಗೆ ತರಲು ಆರೆಸ್ಸೆಸ್ ಎಲ್ಲ ಸಿದ್ದತೆ ನಡೆಸಿದೆ ಎನ್ನಲಾಗಿದೆ.
ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಸುಳ್ಳಿ ನಿವಾಸಿ ಶಶಿ ಸುಳ್ಳಿ ಪಿಯುಸಿ ಕಲಿತ ಆಟೋ ಚಾಲಕ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಕಾರ್ಯಕರ್ತ. ಸಂಘದ ಒಟಿಸಿಯನ್ನು ಪೂರೈಸಿದವರು. ಶಾಸಕ ಅಂಗಾರ ಅವರ ಕಾರು ಚಾಲಕನಾಗಿಯೂ ಸೇವೆ ಸಲ್ಲಿಸಿದ್ದಾರೆ. ಆರೆಸ್ಸೆಸ್ ನಾಯಕ ಮೈಚ ಜಯದೇವ ಅವರೊಂದಗೆ ದುಡಿದು ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು