2:25 AM Thursday4 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ

ಇತ್ತೀಚಿನ ಸುದ್ದಿ

ಸುಳ್ಯ: ಬಾಲಕಿಯ ಅತ್ಯಾಚಾರ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ

26/06/2023, 19:41

ಸುಳ್ಯ(reporterkarnataka.com): ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಸಂತ್ರಸ್ತ ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಹಿಂದೆ ಕಲ್ಮಡ್ಕದ ಚಿದಾನಂದ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತ ಬಾಲಕಿಯನ್ನು ಪುಸಲಾಯಿಸಿ ಕರೆದು ಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಬಾಲಕಿಯ ತಂದೆ ದೂರು ನೀಡಿದ್ದರು. ಇದೀಗ ಬಾಲಕಿಯ ಹೇಳಿಕೆ ಪ್ರಕಾರ ಕಲ್ಮಡ್ಕದ ಚಿದಾನಂದ ಮಾತ್ರವಲ್ಲದೆ, ಬೇರೆ ಬೇರೆ ಸಂದರ್ಭದಲ್ಲಿ ಇನ್ನಿಬ್ಬರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಭಯಾನಕ ಹೇಳಿಕೆಯನ್ನು ಪೊಲೀಸರಿಗೆ ನೀಡಿದ್ದಳು. ಬಾಲಕಿಯ ಹೇಳಿಕೆ ಪ್ರಕಾರ ಇನ್ನಿಬ್ಬರು ಆರೋಪಿಗಳಾದ ಚೇತನ್ ಕಾಯರ್ತಡ್ಕ ಹಾಗೂ ದರ್ಶನ್ ಕಾಯರ್ತಡ್ಕ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಫೋಕ್ಸೋ ಕಾಯ್ದೆ ಪ್ರಕಾರ ಕೇಸು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು